ಗಾಂಧೀಜಿ ಪತ್ರಿಕಾ ಮಾಧ್ಯಮದ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು- ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಹರಿಜನ್, ನವಜೀವನ್, ಯಂಗ್ ಇಂಡಿಯಾ ಮುಂತಾದ ಪತ್ರಿಕೆಗಳನ್ನು ಆರಂಭಿಸಿದ ಗಾಂಧೀಜಿ ತನ್ನ ಬರವಣಿಗೆಯನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಅಸ್ತ್ರವಾಗಿ ಬಳಸಿಕೊಂಡಿದ್ದರು ಎಂದು ಶ್ರೀ ದೇವರಾಜ ಅರಸ್ ಸಮೂಹ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಜೆ. ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಅವರ 155ನೇ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ 120ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿ ಅವರು ಪತ್ರಿಕಾ ಮಾಧ್ಯಮದ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು, ಅವರು ಹೊಂದಿದ್ದ ಅಭಿಪ್ರಾಯ ಹಾಗೂ ವಿಚಾರಗಳು ಇಂದಿಗೂ ಕೂಡ ಪ್ರಸ್ತುತವಾಗಿವೆ, ಅವರು ಅಂದು ಆಡಿದ ಮಾತುಗಳು ಇಂದಿಗೂ ಕೂಡ ಸತ್ಯವಾಗಿವೆ, ಸತ್ಯವೇ ದೇವರು ಸತ್ಯಶೋಧನೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅವರು ಸತ್ಯಾಗ್ರಹ ಮತ್ತು ಅಹಿಂಸೆ ಎಂಬ ಅಸ್ತ್ರಗಳಿಂದ ಭಾರತ ಮಾತೆಯ ದಾಸ್ಯ ಮುಕ್ತಿಗಾಗಿ ಸಮಸ್ತ ಭಾರತೀಯರನ್ನು ಒಗ್ಗೂಡಿಸಿ ಜಾಗತಿಕ ಮನ್ನಣೆ ಗಳಿಸಿದರು, ಅಹಿಂಸೆಯನ್ನು ತಮ್ಮ ದಿನನಿತ್ಯದ ಜೀವನದಲ್ಲೂ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಬಹುದು ಎಂಬುದನ್ನು ತಮ್ಮದೇ ಉದಾಹರಣೆಯ ಮೂಲಕ ಪ್ರದರ್ಶಿಸಿದ್ದು ಅವರ ದೊಡ್ಡ ಸಾಧನೆಯಾಗಿದೆ. ಅವರ ಇಡೀ ಜೀವನ ಸತ್ಯದ ಪ್ರಯೋಗವಾಗಿತ್ತು, ಅವರಂತೆಯೇ ಲಾಲ್ ಬಹದ್ದೂರ್ ಶಾಸ್ತ್ರಿಗಳು ಸಹ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ರೂಡಿಸಿಕೊಂಡಿದ್ದರು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಇಂದು ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಗಾಂಧೀಜಿ ತಮ್ಮನ್ನು ಯಾರು ದ್ವೇಷಿಸಿದರೋ ಅವರನ್ನೇ ಪ್ರೀತಿಸುತ್ತಿದ್ದರು, ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕಿದೆ. ತತ್ವ, ಅಹಿಂಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕಿದೆ ಅವರ ಬದುಕು ಬೋಧನೆ, ತತ್ವ, ಆದರ್ಶಗಳು ನಮ್ಮೆಲ್ಲರ ಹೃದಯಗಳಲ್ಲಿ ಎಂದಿಗೂ ಅಜರಾಮರ ಅವರು ಹೇಳಿದ ಅನೇಕ ಮಾತುಗಳು ಇವತ್ತಿಗೂ ಸತ್ಯ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ಅಧಿಕಾರಿಗಳಾದ ಬಾಬುರೆಡ್ಡಿ, ಅಭಿಯಂತರರಾದ ರಮೇಶ್ , ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರಾದ ಮಹಾಂತೇಶಪ್ಪ, ನರಸಿಂಹರೆಡ್ಡಿ, ಧನಂಜಯ್ ರವಿಕುಮಾರ್, ಉಪ ಪ್ರಾಂಶುಪಾಲರಾದ ದಕ್ಷಿಣ ಮೂರ್ತಿ, ಜಿಯಾಉಲ್ಲಾಖಾನ್, ಮ್ಯಾನೇಜರ್ ಯತಿನ್, ಉದ್ಯೋಗ ಅಧಿಕಾರಿಯಾದ ಬಾಬುಸಾಬಿ, ಎನ್.ಎಸ್.ಎಸ್ ಅಧಿಕಾರಿ ಲಕ್ಷ್ಮೀಶ, ಲಯನ್ಸ್ ಕ್ಲಬ್ ಖಜಾಂಚಿ ರವಿಕುಮಾರ್, ಪ್ರಾಧ್ಯಾಪಕರಾದ ಶ್ರೀನಿವಾಸ್,ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

9 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

14 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago