‘ಗಾರೆ ಮೇಸ್ತ್ರಿಗಳಿಗೆ ಕೆಲಸ ಕೊಡಬೇಡಿ’ ಪುಷ್ಪಕ್ ರಾಜ್ ಹೇಳಿಕೆ ವಿಚಾರ- ಪುಷ್ಪಕ್ ರಾಜ್ ವಿರುದ್ಧ ಸಿಡಿದೆದ್ದ ನೆಲದಾಂಜನೇಯಸ್ವಾಮಿ ಕಟ್ಟಡ ಕೂಲಿ ಕಾರ್ಮಿಕರು, ಮೇಸ್ತ್ರಿಗಳ ಸಂಘ- ಬೇಷರತ್ ಕ್ಷಮೆಯಾಚಿಸುವಂತೆ ಒತ್ತಾಯ

ಗಾರೆ ಮೇಸ್ತ್ರಿ ಭದ್ರಾವತಿ ಮಂಜುನಾಥ್ ಎಂಬುವವರು ನಮ್ಮಿಂದ ಹೆಚ್ಚಿನ ಹಣ ಪಡೆದು ಪೂರ್ತಿ ಕೆಲಸ ಮಾಡದೇ ವಂಚಿಸಿದ್ದಾರೆ ಎಂದು ಮನೆ ಮಾಲೀಕ ಪುಷ್ಪಕ್ ರಾಜ್ ಆರೋಪ ಮಾಡಿದ್ದಾರೆ ಈ ಆರೋಪ ಸತ್ಯಕ್ಕೆ ದೂರವಗಿದೆ. ಅಲ್ಲದೆ ತಾಲ್ಲೂಕಿನ ಗಾರೆ ಮೇಸ್ತ್ರಿಗಳಿಗೆ ಕೆಲಸ ಕೊಡಬೇಡಿ ಎಂಬ ಹೇಳಿಕೆಯನ್ನು ನೀಡಿದ್ದು, ಈ ಕೂಡಲೇ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು  ನೆಲದಾಂಜನೇಯಸ್ವಾಮಿ ಕಟ್ಟಡ ಕೂಲಿ ಕಾರ್ಮಿಕರು, ಮೇಸ್ತ್ರಿಗಳ ಸಂಘದ ಅಧ್ಯಕ್ಷ ಅರವಿಂದ್ ಶೇಖರ್ ಗೌಡ ಆಗ್ರಹಿಸಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ತಮ್ಮ ಮನೆ ನಿರ್ಮಾಣದ ಕುರಿತು ಹಲವು ಸುಳ್ಳು ಆರೋಪಗಳನ್ನು ಮಾಡಿರುವ ಪುಷ್ಪಕ್ ರಾಜ್ ತಾಲ್ಲೂಕಿನ ಕೂಲಿ ಕಾರ್ಮಿಕರಾಗಿ ಸದಾ ನಿಷ್ಠೆ ಹಾಗು ಪ್ರಮಾಣಿಕರಾಗಿ ದುಡಿಯುವ ಗಾರೆ ಮೇಸ್ತ್ರಿಗಳ ಮೇಲೆ ಗಂಭೀರ ಆರೋಪ  ಮಾಡಿದ್ದಾರೆ. ಸ್ಥಳೀಯ ಮೇಸ್ತ್ರಿಗಳಿಗೆ ಮನೆ ಕಟ್ಟುವ ಕೆಲಸ ನೀಡದಂತೆ ಮಾಧ್ಯಮ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ನಮ್ಮ ಸಂಘ ಖಂಡಿಸುತ್ತದೆ ಎಂದರು.

ಕಟ್ಟಡ ಕಾರ್ಮಿಕ ಹಾಗೂ ಗಾರೆ ಮೇಸ್ತ್ರಿ ಭದ್ರಾವತಿ ಮಂಜುನಾಥ್ ಮಾತನಾಡಿ, ನಾನು ತಾಲ್ಲೂಕಿನ ಸೋಮೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಕಳೆದ 20 ವರ್ಷಗಳಿಂದ ಗಾರೆ ಮೇಸ್ತ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಗರದ ಕುಚ್ಚಪ್ಪನಪೇಟೆಯ ಕಾಳಮ್ಮ ದೇವಾಲಯದ ರಸ್ತೆಯಲ್ಲಿ ಕಳೆದ ಜೂನ್ 2023 ರಲ್ಲಿ ವರ್ಷ ಪ್ರದೀಪ್ ಹಾಗು ಪುಷಕ್ ರಾಜ್ ಎಂಬುವರ ಒಂದು ಕಟ್ಟಡ ನಿರ್ಮಾಣದ ಕೆಲಸ ವಹಿಸಿಕೊಂಡಿದ್ದು, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ (agreement ) ಕೂಡ ಮಾಡಿಕೊಂಡಿದ್ದು, ಒಟ್ಟಾರೆ 4 ಅಂತಸ್ತಿನ ಮಾಯೆಯಾಗಿದ್ದು, 18 ಚದುರ ಅಡಿಗಳ ಕಟ್ಟಡವಾಗಿರುತ್ತದೆ. 2ಲಕ್ಷದ 15 ಸಾವಿರರೂಗಳಂತೆ ಪ್ರತಿ ಚದುರಕ್ಕೂ ಮನೆ ನಿರ್ಮಿಸುವ ಒಪ್ಪಂದವಾಗಿತ್ತು. ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಶ್ಯಕ ಸುಮಾರು 35 ವಸ್ತುಗಳ ಪಟ್ಟಿ ಒಳಗೊಂಡಂತೆ 6 ತಿಂಗಳುಗಳ ಒಳಗೆ ಮನೆ ನಿರ್ಮಿಸಿಕೊಡುವಂತೆ ಇಬ್ಬರ ನಡುವೆ ಅಗ್ರಿಮೆಂಟ್ ಮಾಡಲಾಗಿತ್ತು. ಇದೆ ಒಡಂಬಡಿಕೆಯಲ್ಲಿ ನಾವು ಮಾಡಿಕೊಂಡಿದ್ದ ಒಪ್ಪಂದದಂತೆ ಸೂಕ್ತ ಸಮಯಕ್ಕೆ ಹಣ ನೀಡಡೇ ಕೆಲಸ ವಿಳಂಬಕ್ಕೆ ಕಾರಣವಾದರು. ಆದರೂ ನಾವು ಫೆಬ್ರುವರಿ 2024 ರವರೆಗೂ ಕೆಲಸ ಮಾಡಿ ಶೇ .90 ರಷ್ಟು ಕಟ್ಟಡ ನಿರ್ಮಾಣ ಕೆಲಸ ಮುಗಿಸಿದ್ದೇವೆ. ನಮಗೆ ನೀಡಬೇಕಿದ್ದ ಹಣ ನೀಡದೆ ಸತಾಯಿಸಿದರು ಎಂದರು.

ನನ್ನ ವಿರುದ್ಧವಾಗಿ ವಂಚನೆ ಮಾಡಿದ್ದೇನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಈ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ  ನಮ್ಮ ಸಂಘಕ್ಕೆ ಸೂಚಿಸಿದ ಹಿನ್ನೆಲೆ ಪರಿಣಿತಿ ಪಡೆದ ಇಂಜಿನಿಯರ್ ಮುಖೇನ ಮನೆಯ ನಿರ್ಮಾಣದ ವೆಚ್ಚದ ಮೌಲ್ಯವನ್ನು ಅಳೆಯಲಾಗಿ ಒಟ್ಟು 41,11, 000 ನಿಗದಿ ಮಾಡಿ ಈಗಾಗಲೇ ಶೇ 90 ರಷ್ಟು ಕೆಲಸ ಮಾಡಿರುವ ಹಿನ್ನೆಲೆ ಮೇಸ್ಟ್ರೀಗೆ ಮಂಜುನಾಥ್ ಅವರಿಗೆ ನೀಡಿರುವ 26 ಲಕ್ಷ ಹೊರತುಪಡಿಸಿ ಉಳಿಕೆ ಮೊತ್ತವನ್ನು ನೀಡಬೇಕು ಎಂದು ತಿಳಿಸಲಾಗಿತ್ತು. ಅದರಂತೆ ನಮ್ಮ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ 11,14,000 ಹಣವನ್ನು ನಾನು ಬಾಕಿ ನೀಡಬೇಕಿದ್ದ ಹಲವರಿಗೆ ನೇರವಾಗಿ ಪುಷ್ಪಾಕ್ ರಾಜು ಅವರೇ ನೀಡಿ 28/3/2025 ರಲ್ಲಿ ಎರಡನೇ ಅಗ್ರಿಮೆಂಟ್ ಮಾಡಿಕೊಂಡು ಒಂದು ತಿಂಗಳ ಗಡವು ನೀಡಿ ಮನೆ ಕೆಲಸ ಪೂರ್ಣಗೊಳಿಸುವಂತೆ ತಿಳಿಸುತ್ತಾರೆ. ಜೊತೆಗೆ ಉಳಿಕೆ ಹಣವನ್ನು ಗೃಹಪ್ರವೇಶದ ನಂತರ ನೀಡುತ್ತೇವೆ ಎಂದು ತಿಳಿಸಿರುತ್ತಾರೆ. ಕೊಟ್ಟ ಮಾತಿನಂತೆ ನಾನು ನನ್ನ ಕರ್ತವ್ಯ ನಿರ್ವಹಿಸಿ ಕಟ್ಟಡವನ್ನು ಮಾಲೀಕರಿಗೆ ಹಸ್ತಾಂತರಿಸಿದ್ದೇನೆ. ಆದರೆ ಈವರೆಗೂ ನನಗೆ ಬರಬೇಕಿದ್ದ 3,60,000 ಹಣ ನೀಡದೇ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಮನೆ ಮಾಲೀಕರಿಗೆ ಯಾವುದೇ ರೀತಿಯ ಮೋಸ ವಂಚನೆ ಮಾಡಿಲ್ಲ ಎಂದರು.

ವಕೀಲರಾದ ಸುರೇಶ್ ಕುಮಾರ್ ಮಾತನಾಡಿ, ಈ ಪ್ರಕರಣದಲ್ಲಿ ಕೋರ್ಟ್ ನಾವು ಸಲ್ಲಿಸಿದ್ದ ಅರ್ಜಿ ಹಾಗು ದಾಖಲಾತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದ ಕಾರಣ ನ್ಯಾಯಾಲಯದ ತೀರ್ಪು ನಮ್ಮ ವಿರುದ್ಧ ಬಂದಿದೆ. ಮೇಲ್ಮನವಿ ಕೋರಿ ಈಗಾಗಲೇ ನಾವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸೂಕ್ತ ದಾಖಲೆಗಳನ್ನು ಒದಗಿಸಿ ನ್ಯಾಯ ಪಡೆಯಲಿದ್ದೇವೆ. ಮನೆ ಮಾಲೀಕ ಪುಷ್ಪಕ್ ರಾಜ್ ತಾಲೂಕಿನ ಎಲ್ಲ ಗಾರೆ ಮೇಸ್ತ್ರಿಗಳ ಬಗ್ಗೆ  ಮಾಡಿರುವ ಆರೋಪ ಸರಿಯಿಲ್ಲ. ಈ ಬಗ್ಗೆ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಾಲಯ ಮೂಲಕವೇ ಉತ್ತರಿಸಲಿದ್ದೇವೆ ಎಂದರು.

ಈ ವೇಳೆ ನೆಲದಾಂಜನೇಯಸ್ವಾಮಿ ಕಟ್ಟಡ ಕೂಲಿ ಕಾರ್ಮಿಕರು, ಮೇಸ್ತ್ರಿಗಳ ಸಂಘದ ಸಲಹೆಗಾರ ಚಂದ್ರಪ್ಪ , ಅಧ್ಯಕ್ಷ ಅರವಿಂದ್ ಶೇಖರ್ ಗೌಡ, ಉಪಾಧ್ಯಕ್ಷ ಮಲ್ಲೇಶ್, ಖಜಾಂಚಿ ಸತೀಶ್, ಭದ್ರಾವತಿ ಮಂಜುನಾಥ್, ಕಾನೂನು ಸಲಹೆಗಾರ ಸುರೇಶ ಕುಮಾರ್, ಸಂಚಾಲಕರಾದ ರಾಜಣ್ಣ, ಸಿದ್ದಪ್ಪ, ಎಂಜಿನಿಯರ್ ಪ್ರೇಮ್ ಕುಮಾರ್, ಸಹ ಕಾರ್ಯದರ್ಶಿ ದೀಪು ನಾಯಕ್, ಎಲ್. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

8 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

18 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

19 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago