ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಹೇಳಿದರು.
ಗಾಳಿಪಟ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರದಲ್ಲಿ ಗಾಳಿಪಟ ಉತ್ಸವಗಳು ಹೆಚ್ಚಾಗಿ ನಡೆಯುತ್ತಿರುವುದು ಅಭಿನಂದನೀಯ. ಇಲ್ಲಿನ ಗಾಳಿಪಟ ಕಲಾವಿದರು ರಾಜ್ಯಮಟ್ಟದಲ್ಲಿಯೂ ಹೆಸರುವಾಸಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ಗಾಳಿಪಟ ಕಲೆಗೆ ವಿಶೇಷ ಖ್ಯಾತಿ ಪಡೆದಿದೆ. ಇಲ್ಲಿನ ಗಾಳಿಪಟ ಹವ್ಯಾಸಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ ಹಾರಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ರಾಷ್ಟ್ರೀಯ ಮಟ್ಟದ ಗಾಳಿಪಟ ಸ್ಪರ್ಧೆಯನ್ನು ಆಯೋಜಿಸಲು ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.
ನಗರಸಭೆ ಸದಸ್ಯ ತ.ನ. ಪ್ರಭುದೇವ ಮಾತನಾಡಿ, ಶಾಲಾ ಮಕ್ಕಳಲ್ಲಿ ಗಾಳಿಪಟ ಕಲೆಯ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸಿರುವುದು ಸ್ವಾಗತಾರ್ಹ. ಇಂತಹ ಉತ್ಸವಗಳು ಹೆಚ್ಚಾಗಿ ನಡೆದಾಗ ಜಾನಪದ ಕಲೆಗಳು ಉಳಿದು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗಾಳಿಪಟ ಕಲಾ ಸಂಘದ ಅಧ್ಯಕ್ಷ ಎಲ್.ಎನ್. ಶ್ರೀನಾಥ್, ಕಾರ್ಯದರ್ಶಿ ಎ.ಎನ್. ಪ್ರಕಾಶ್, ಜಿಲ್ಲಾ ಘಟಕದ ಅಧ್ಯಕ್ಷ ಎ.ಎನ್. ಪ್ರಕಾಶ್, ನಗರಸಭೆ ಅಧ್ಯಕ್ಷೆ ಪ್ರಭಾ ನಾಗರಾಜ್, ಉಪಾಧ್ಯಕ್ಷ ವೆಂಕಟೇಶ್, ಸಂಘದ ಉಪಾಧ್ಯಕ್ಷ ಎಸ್. ಮುನಿರಾಜು, ಖಜಾಂಚಿ ವಿಶ್ವನಾಥ್, ಸಹ ಕಾರ್ಯದರ್ಶಿ ಜೆ.ವಿ. ಸುಬ್ರಹ್ಮಣ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…