ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಹೇಳಿದರು.
ಗಾಳಿಪಟ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರದಲ್ಲಿ ಗಾಳಿಪಟ ಉತ್ಸವಗಳು ಹೆಚ್ಚಾಗಿ ನಡೆಯುತ್ತಿರುವುದು ಅಭಿನಂದನೀಯ. ಇಲ್ಲಿನ ಗಾಳಿಪಟ ಕಲಾವಿದರು ರಾಜ್ಯಮಟ್ಟದಲ್ಲಿಯೂ ಹೆಸರುವಾಸಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ಗಾಳಿಪಟ ಕಲೆಗೆ ವಿಶೇಷ ಖ್ಯಾತಿ ಪಡೆದಿದೆ. ಇಲ್ಲಿನ ಗಾಳಿಪಟ ಹವ್ಯಾಸಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ ಹಾರಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ರಾಷ್ಟ್ರೀಯ ಮಟ್ಟದ ಗಾಳಿಪಟ ಸ್ಪರ್ಧೆಯನ್ನು ಆಯೋಜಿಸಲು ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.
ನಗರಸಭೆ ಸದಸ್ಯ ತ.ನ. ಪ್ರಭುದೇವ ಮಾತನಾಡಿ, ಶಾಲಾ ಮಕ್ಕಳಲ್ಲಿ ಗಾಳಿಪಟ ಕಲೆಯ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸಿರುವುದು ಸ್ವಾಗತಾರ್ಹ. ಇಂತಹ ಉತ್ಸವಗಳು ಹೆಚ್ಚಾಗಿ ನಡೆದಾಗ ಜಾನಪದ ಕಲೆಗಳು ಉಳಿದು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗಾಳಿಪಟ ಕಲಾ ಸಂಘದ ಅಧ್ಯಕ್ಷ ಎಲ್.ಎನ್. ಶ್ರೀನಾಥ್, ಕಾರ್ಯದರ್ಶಿ ಎ.ಎನ್. ಪ್ರಕಾಶ್, ಜಿಲ್ಲಾ ಘಟಕದ ಅಧ್ಯಕ್ಷ ಎ.ಎನ್. ಪ್ರಕಾಶ್, ನಗರಸಭೆ ಅಧ್ಯಕ್ಷೆ ಪ್ರಭಾ ನಾಗರಾಜ್, ಉಪಾಧ್ಯಕ್ಷ ವೆಂಕಟೇಶ್, ಸಂಘದ ಉಪಾಧ್ಯಕ್ಷ ಎಸ್. ಮುನಿರಾಜು, ಖಜಾಂಚಿ ವಿಶ್ವನಾಥ್, ಸಹ ಕಾರ್ಯದರ್ಶಿ ಜೆ.ವಿ. ಸುಬ್ರಹ್ಮಣ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…