ಗಾಳಿಪಟ ಉತ್ಸವಕ್ಕೆ ಅದ್ಧೂರಿ ಚಾಲನೆ: ಬಾನಂಗಳದಲ್ಲಿ ಹಾರಾಡಿದ ವಿವಿಧ ಕಲಾಕೃತಿಗಳ ಗಾಳಿಪಟಗಳು

ಕರ್ನಾಟಕ ಜಾನಪದ ಪರಿಷತ್ತು, ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭುವನೇಶ್ವರಿನಗರದ ಮುನಿನಂಜಪ್ಪನವರ ಜಮೀನಿನಲ್ಲಿ ನಡೆದ ರಾಜ್ಯ ಮಟ್ಟದ ಗಾಳಿಪಟ ಉತ್ಸವ 2025ರಲ್ಲಿ ನೂರಾರು ಗಾಳಿಪಟಗಳು ಬಾನಂಗಳದಲ್ಲಿ ಹಾರಾಡಿದವು.

ಬೆಂಗಳೂರು, ಮಂಡ್ಯ, ಬೆಳಗಾವಿ ಮೊದಲಾದ ಕಡೆಗಳಿಂದ ಆಗಮಿಸಿದ್ದ ಗಾಳಿಪಟ ಕಲಾವಿದರು, ತಮ್ಮ ಗಾಳಿಪಟ ಕಲೆ ಪ್ರದರ್ಶಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಮಕ್ಕಳಿಗಾಗಿ ಉಚಿತ ಗಾಳಿಪಟ ತಯಾರಿಕೆ ತರಬೇತಿ ನೀಡಲಾಯಿತು.

ಉತ್ಸವಕ್ಕೆ ಚಾಲನೆ :

ಗಾಳಿಪಟ ಹಾರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಗಾಳಿಪಟ ಕಲೆಯಲ್ಲಿ ದೊಡ್ಡಬಳ್ಳಾಪುರ ಖ್ಯಾತಿ ಹೊಂದಿದ್ದು, ಇಂದು ರಾಜ್ಯ ಮಟ್ಟದ ಉತ್ಸವ ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಗಾಳಿಪಟ ಹಾರಿಸುವ ಜಾನಪದ ಕಲೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಇಂದಿನ ಪೀಳಿಗೆ ಆಸಕ್ತಿ ವಹಿಸಬೇಕಿದೆ. ಗಾಳಿಪಟ ಕಲೆಗೆ ಉತ್ತೇಜನ ನೀಡಲು, ಜಾನಪದ ಪರಿಷತ್ತು ಯೋಜನೆಗಳನ್ನು ರೂಪಿಸಬೇಕಿದೆ. ಅಂತೆಯೇ ಜಾನಪದ ಪರಿಷತ್ತಿನ ಮೂಲಕ ಜಾನಪದ ಕಲೆಗಳನ್ನು ಉತ್ತೇಜಿಸಲು ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ ಎಂದರು.

ಚಿಂತಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಮಾತನಾಡಿ, ಜಾಗತೀಕರಣದ ಇಂದಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು, ಪರಂಪರೆಗಳು ಮರೆಯಾಗುತ್ತಿವೆ. ನಮ್ಮ ಜಾನಪದ ಸಂಸ್ಕೃತಿಯಲ್ಲಿ ಜನರ ಬಾವೈಕ್ಯತೆಗೆ ಪೂರಕವಾದ, ಗ್ರಾಮೀಣ ಕ್ರೀಡೆಗಳು, ಉತ್ಸವಗಳು ಹಿಂದಿನಿಂದಲೂ ಆಚರಣೆ ಮಾಡುತ್ತಾ ಬಂದಿದ್ದು, ಜನರ ಸಾಮೂಹಿಕ ಭಾಗವಹಿಸುವಿಕೆಗೆ ಇಂಬು ನೀಡುತ್ತವೆ. ಆದರೆ ಇತ್ತೀಚೆಗೆ ಕಬಡ್ಡಿ, ಕೊಕ್ಕೊ ಮೊದಲಾದ ಗ್ರಾಮೀಣ ಕ್ರೀಡೆಗಳು ಕಾರ್ಪೋರೇಟ್ ವ್ಯವಸ್ಥೆಗೆ ಸಿಕ್ಕಿ ಹಣ ಮಾಡಲು ಬಳಸಿಕೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಬೇಕಾದರೆ ಜನರ ಭಾಗವಹಿಸುವಿಕೆ ಮುಖ್ಯವಾಗಿದ್ದು, ಗಾಳಿಪಟದಂತಹ ಕಲೆಗಳು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕಿದೆ ಎಂದರು.

ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾನಪದ ತಜ್ಞ ಎಚ್.ಎಲ್.ನಾಗೇಗೌಡ ಅವರ ಪರಿಶ್ರಮದಿಂದಾಗಿ ರೂಪುಗೊಂಡಿರುವ ಕರ್ನಾಟಕ ಜಾನಪದ ಪರಿಷತ್ತುಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ನಮ್ಮ ಪಾರಂಪರಿಕ ಕಲೆಯಾದ ಗಾಳಿಪಟದ ಬಗ್ಗೆ ಪ್ರಚುರಪಡಿಸಲು, ಗಾಳಿಪಟ ಉತ್ಸವ ಸ್ಪರ್ಧೆಗಳನ್ನು ಸಹ ಏರ್ಪಡಿಸುತ್ತಾ ಬರುತ್ತಿದ್ದು, ಇಂದು ದೊಡ್ಡಬಳ್ಳಾಪುರದಲ್ಲಿ ಗಾಳಿಪಟ ಉತ್ಸವ ಏರ್ಪಡಿಸಲಾಗಿದೆ. ಜಾನಪದ ಪರಿಷತ್ತಿನ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ದೊರೆತರೆ ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗಲಿದೆ ಎಂದರು.

ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಅಧ್ಯಕ್ಷ ಎಲ್.ಎನ್.ಶ್ರೀನಾಥ್ ಪ್ರಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಾದ ಎಂ.ವೆಂಕಟರಾಜು(ಡೋಲು ವಾದಕರು), ಕೆ.ಪಿ.ಪ್ರಕಾಶ್(ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು),ಎನ್.ಎಂ.ನಟರಾಜ್(ಪತ್ರಿಕೋದ್ಯಮ),ಗಂಗಾಧರ(ಯಕ್ಷಗಾನ ಭಾಗವತರು), ಪೈಲ್ವಾನ್ ಪಿಳ್ಳಪ್ಪ (ಕ್ರೀಡೆ)ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್, ನಗರಸಭೆ ಸದಸ್ಯ ಆರ್.ಲಕ್ಷ್ಮೀಪತಿ, ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಕಾರ್ಯದರ್ಶಿ ಎ.ಎನ್.ಪ್ರಕಾಶ್, ಉಪಾಧ್ಯಕ್ಷ ಎಸ್.ಮುನಿರಾಜು, ಖಜಾಂಚಿ ವಿಶ್ವನಾಥ್, ಸಹ ಕಾರ್ಯದರ್ಶಿ ಜೆ.ವಿ.ಸುಬ್ರಹ್ಮಣ್ಯ ಸೇರಿದಂತೆ ಸಂಘದ ಪದಾಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

12 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

14 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

15 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

20 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

21 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago