Categories: ತುಮಕೂರು

ಗಿಡ ನೆಡುವ ಮೂಲಕ ಕೆ.ಎಸ್.ಇ.ಎಫ್ ಮಹಾವಿದ್ಯಾಲಯದಲ್ಲಿ ಪರಿಸರ ದಿನಾಚರಣೆ ಆಚರಣೆ

ಇತ್ತೀಚಿನ ದಿನಗಳಲ್ಲಿ ಪರಿಸರದ ಮೇಲೆ ಮಾನವರು ತನ್ನ ಸ್ವಾರ್ಥ ಸಾಧನೆಗಾಗಿ ಮರ ಗಿಡಗಳನ್ನು ಕಡಿಯುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಆದಕಾರಣ ಗಿಡ ಮರಗಳನ್ನು ನೆಡುವುದರ ಮುಖೇನ ಪರಿಸರವನ್ನು ಸಂರಕ್ಷಿಸಬೇಕೆಂದು ಕಾರ್ಯಕ್ರಮದ ಗೌರವ ಅತಿಥಿ ಪರಮೇಶ್ ಜಿ. ಸಂದೇಶ ನೀಡಿದರು.

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶ್ರೀ ಕಲ್ಪವೃಕ್ಷ ಯುವ ನಗರ ಮತ್ತು ಗ್ರಾಮೀಣಅಭಿವೃದ್ಧಿ ಸಂಸ್ಥೆ (ರಿ) ತುಮಕೂರು, ಆದಿ ಸಂಜೀವಿನಿ ಯುವ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ) ತುಮಕೂರು, ಮಾತೃಭೂಮಿ ಸಮಗ್ರ ಸಮಾಜಾಭಿವೃಧ್ಧಿ ಸಂಸ್ಥೆ (ರಿ) ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕೆ. ಎಸ್.ಇ.ಎಫ್ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪಿ. ರಾಮಕೃಷ್ಣ ವಹಿಸಿದ್ದರು. ಈ ಸಂಧರ್ಭದಲ್ಲಿ ರಮೇಶ್.ಟಿ, ಸಿದ್ದೇಶ್.ಕೆ ಹಾಗೂ ಈ ಕಾಲೇಜಿನ ಉಪನ್ಯಾಸಕರಾದ ಡಾ. ಹರೀಶ್, ಡಾ.ಅರುಣ, ಡಾ. ಕುಮಾರ ಸ್ವಾಮಿ, ರತ್ನಪ್ರಭಾ. ಭೋದಕೇತರ ಸಿಬ್ಬಂದಿ ವರ್ಗದವರಾದ ಸ್ವಾಮಿ, ರಾಜಶೇಖರ್ ಉಪಸ್ಥಿತರಿದ್ದರು.

ವಂದನಾ ಕಾರ್ಯಕ್ರಮ ನಿರೂಪಿಸಿದರು. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಭೀರಲಿಂಗ, ರೇಖಾ, ನಳಿನ, ಭೂಮಿಕ, ಕಾವ್ಯ ಯಶಸ್ವಿನಿ ವಿಧ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಿಸಲಾಯಿತು.  ಆನಂತರ ಕಾಲೇಜಿನ ಸುತ್ತಮುತ್ತಲು ವಿವಿಧ ರೀತಿಯ ಸಸ್ಯಗಳನ್ನು ವಿದ್ಯಾರ್ಥಿಗಳೊಂದಿಗೆ ನೆಡಲಾಯಿತು.

Ramesh Babu

Journalist

Recent Posts

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

8 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

19 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

23 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

1 day ago