Categories: ತುಮಕೂರು

ಗಿಡ ನೆಡುವ ಮೂಲಕ ಕೆ.ಎಸ್.ಇ.ಎಫ್ ಮಹಾವಿದ್ಯಾಲಯದಲ್ಲಿ ಪರಿಸರ ದಿನಾಚರಣೆ ಆಚರಣೆ

ಇತ್ತೀಚಿನ ದಿನಗಳಲ್ಲಿ ಪರಿಸರದ ಮೇಲೆ ಮಾನವರು ತನ್ನ ಸ್ವಾರ್ಥ ಸಾಧನೆಗಾಗಿ ಮರ ಗಿಡಗಳನ್ನು ಕಡಿಯುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಆದಕಾರಣ ಗಿಡ ಮರಗಳನ್ನು ನೆಡುವುದರ ಮುಖೇನ ಪರಿಸರವನ್ನು ಸಂರಕ್ಷಿಸಬೇಕೆಂದು ಕಾರ್ಯಕ್ರಮದ ಗೌರವ ಅತಿಥಿ ಪರಮೇಶ್ ಜಿ. ಸಂದೇಶ ನೀಡಿದರು.

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶ್ರೀ ಕಲ್ಪವೃಕ್ಷ ಯುವ ನಗರ ಮತ್ತು ಗ್ರಾಮೀಣಅಭಿವೃದ್ಧಿ ಸಂಸ್ಥೆ (ರಿ) ತುಮಕೂರು, ಆದಿ ಸಂಜೀವಿನಿ ಯುವ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ) ತುಮಕೂರು, ಮಾತೃಭೂಮಿ ಸಮಗ್ರ ಸಮಾಜಾಭಿವೃಧ್ಧಿ ಸಂಸ್ಥೆ (ರಿ) ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕೆ. ಎಸ್.ಇ.ಎಫ್ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪಿ. ರಾಮಕೃಷ್ಣ ವಹಿಸಿದ್ದರು. ಈ ಸಂಧರ್ಭದಲ್ಲಿ ರಮೇಶ್.ಟಿ, ಸಿದ್ದೇಶ್.ಕೆ ಹಾಗೂ ಈ ಕಾಲೇಜಿನ ಉಪನ್ಯಾಸಕರಾದ ಡಾ. ಹರೀಶ್, ಡಾ.ಅರುಣ, ಡಾ. ಕುಮಾರ ಸ್ವಾಮಿ, ರತ್ನಪ್ರಭಾ. ಭೋದಕೇತರ ಸಿಬ್ಬಂದಿ ವರ್ಗದವರಾದ ಸ್ವಾಮಿ, ರಾಜಶೇಖರ್ ಉಪಸ್ಥಿತರಿದ್ದರು.

ವಂದನಾ ಕಾರ್ಯಕ್ರಮ ನಿರೂಪಿಸಿದರು. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಭೀರಲಿಂಗ, ರೇಖಾ, ನಳಿನ, ಭೂಮಿಕ, ಕಾವ್ಯ ಯಶಸ್ವಿನಿ ವಿಧ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಿಸಲಾಯಿತು.  ಆನಂತರ ಕಾಲೇಜಿನ ಸುತ್ತಮುತ್ತಲು ವಿವಿಧ ರೀತಿಯ ಸಸ್ಯಗಳನ್ನು ವಿದ್ಯಾರ್ಥಿಗಳೊಂದಿಗೆ ನೆಡಲಾಯಿತು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

21 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago