ಇತ್ತೀಚಿನ ದಿನಗಳಲ್ಲಿ ಪರಿಸರದ ಮೇಲೆ ಮಾನವರು ತನ್ನ ಸ್ವಾರ್ಥ ಸಾಧನೆಗಾಗಿ ಮರ ಗಿಡಗಳನ್ನು ಕಡಿಯುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಆದಕಾರಣ ಗಿಡ ಮರಗಳನ್ನು ನೆಡುವುದರ ಮುಖೇನ ಪರಿಸರವನ್ನು ಸಂರಕ್ಷಿಸಬೇಕೆಂದು ಕಾರ್ಯಕ್ರಮದ ಗೌರವ ಅತಿಥಿ ಪರಮೇಶ್ ಜಿ. ಸಂದೇಶ ನೀಡಿದರು.
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶ್ರೀ ಕಲ್ಪವೃಕ್ಷ ಯುವ ನಗರ ಮತ್ತು ಗ್ರಾಮೀಣಅಭಿವೃದ್ಧಿ ಸಂಸ್ಥೆ (ರಿ) ತುಮಕೂರು, ಆದಿ ಸಂಜೀವಿನಿ ಯುವ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ) ತುಮಕೂರು, ಮಾತೃಭೂಮಿ ಸಮಗ್ರ ಸಮಾಜಾಭಿವೃಧ್ಧಿ ಸಂಸ್ಥೆ (ರಿ) ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕೆ. ಎಸ್.ಇ.ಎಫ್ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪಿ. ರಾಮಕೃಷ್ಣ ವಹಿಸಿದ್ದರು. ಈ ಸಂಧರ್ಭದಲ್ಲಿ ರಮೇಶ್.ಟಿ, ಸಿದ್ದೇಶ್.ಕೆ ಹಾಗೂ ಈ ಕಾಲೇಜಿನ ಉಪನ್ಯಾಸಕರಾದ ಡಾ. ಹರೀಶ್, ಡಾ.ಅರುಣ, ಡಾ. ಕುಮಾರ ಸ್ವಾಮಿ, ರತ್ನಪ್ರಭಾ. ಭೋದಕೇತರ ಸಿಬ್ಬಂದಿ ವರ್ಗದವರಾದ ಸ್ವಾಮಿ, ರಾಜಶೇಖರ್ ಉಪಸ್ಥಿತರಿದ್ದರು.
ವಂದನಾ ಕಾರ್ಯಕ್ರಮ ನಿರೂಪಿಸಿದರು. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ಭೀರಲಿಂಗ, ರೇಖಾ, ನಳಿನ, ಭೂಮಿಕ, ಕಾವ್ಯ ಯಶಸ್ವಿನಿ ವಿಧ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಿಸಲಾಯಿತು. ಆನಂತರ ಕಾಲೇಜಿನ ಸುತ್ತಮುತ್ತಲು ವಿವಿಧ ರೀತಿಯ ಸಸ್ಯಗಳನ್ನು ವಿದ್ಯಾರ್ಥಿಗಳೊಂದಿಗೆ ನೆಡಲಾಯಿತು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…