ಇತ್ತೀಚಿನ ದಿನಗಳಲ್ಲಿ ಪರಿಸರದ ಮೇಲೆ ಮಾನವರು ತನ್ನ ಸ್ವಾರ್ಥ ಸಾಧನೆಗಾಗಿ ಮರ ಗಿಡಗಳನ್ನು ಕಡಿಯುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಆದಕಾರಣ ಗಿಡ ಮರಗಳನ್ನು ನೆಡುವುದರ ಮುಖೇನ ಪರಿಸರವನ್ನು ಸಂರಕ್ಷಿಸಬೇಕೆಂದು ತೂಬಗೆರೆ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ ಸಂದೇಶ ನೀಡಿದರು.
ತೂಬಗೆರೆ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಾಲಿನ್ಯ ತಡೆಯಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಾಗರ್, ದೇವನಹಳ್ಳಿ ಬ್ಲಾಕ್ ಅಧ್ಯಕ್ಷ ಪೃಥ್ವಿ, ವಿಜಯಪುರ ಬ್ಲಾಕ್ ಅಧ್ಯಕ್ಷ ಭಾನುಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರ್ವಿಜ್ ಹಾಗೂ ಗಿರೀಶ್, ಉಪಾಧ್ಯಕ್ಷ ವೆಂಕಟೇಶ್, ಇಂಧದ್, ಕಾರ್ಯದರ್ಶಿ ರಾಜೇಶ್, ಹಾಗೂ ಯುವ ನಾಯಕರಾದ ಪುಟ್ಟು, ಚಂದ್ರು, ಮುನಿರಾಜ, ತೇಜಸ್, ಕಿರಣ್, ನಿತಿನ್, ಧನುಷ್, ಅಫನ್ ಮತ್ತು ಹಲವಾರು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.