Categories: ಕೋಲಾರ

ಗಿಡ ಮರ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.

ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಪ್ರದೇಶದಲ್ಲಿ 33% ಅರಣ್ಯ ಅವಶ್ಯಕತೆ ಇದ್ದು, ಗ್ಲೋಬಲ್ ಯುಗದಿಂದ ಇದು 17 % ಅರಣ್ಯ ಮಾತ್ರ ಇದ್ದು ನಾವುಗಳೇ ಮಾಡಿದ ತಪ್ಪಿಗೆ ಅರಣ್ಯ ನಾಶವಾಗಿದೆ. ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಾವುಗಳೇ ಕೊಡುಗೆಯಾಗಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಿಡಮರಗಳನ್ನು ನೆಟ್ಟು ಬೆಳೆಸೋಣ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

7 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

8 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

23 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

24 hours ago