Categories: ಕೋಲಾರ

ಗಿಡ ಮರ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.

ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಪ್ರದೇಶದಲ್ಲಿ 33% ಅರಣ್ಯ ಅವಶ್ಯಕತೆ ಇದ್ದು, ಗ್ಲೋಬಲ್ ಯುಗದಿಂದ ಇದು 17 % ಅರಣ್ಯ ಮಾತ್ರ ಇದ್ದು ನಾವುಗಳೇ ಮಾಡಿದ ತಪ್ಪಿಗೆ ಅರಣ್ಯ ನಾಶವಾಗಿದೆ. ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಾವುಗಳೇ ಕೊಡುಗೆಯಾಗಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಿಡಮರಗಳನ್ನು ನೆಟ್ಟು ಬೆಳೆಸೋಣ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು

Ramesh Babu

Journalist

Recent Posts

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

1 hour ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

20 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago