ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.
ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…