Categories: ಕೋಲಾರ

ಗಿಡ ಮರ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.

ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಪ್ರದೇಶದಲ್ಲಿ 33% ಅರಣ್ಯ ಅವಶ್ಯಕತೆ ಇದ್ದು, ಗ್ಲೋಬಲ್ ಯುಗದಿಂದ ಇದು 17 % ಅರಣ್ಯ ಮಾತ್ರ ಇದ್ದು ನಾವುಗಳೇ ಮಾಡಿದ ತಪ್ಪಿಗೆ ಅರಣ್ಯ ನಾಶವಾಗಿದೆ. ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಾವುಗಳೇ ಕೊಡುಗೆಯಾಗಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಿಡಮರಗಳನ್ನು ನೆಟ್ಟು ಬೆಳೆಸೋಣ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago