Categories: ಕೋಲಾರ

ಗಿಡ ಮರ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.

ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಪ್ರದೇಶದಲ್ಲಿ 33% ಅರಣ್ಯ ಅವಶ್ಯಕತೆ ಇದ್ದು, ಗ್ಲೋಬಲ್ ಯುಗದಿಂದ ಇದು 17 % ಅರಣ್ಯ ಮಾತ್ರ ಇದ್ದು ನಾವುಗಳೇ ಮಾಡಿದ ತಪ್ಪಿಗೆ ಅರಣ್ಯ ನಾಶವಾಗಿದೆ. ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಾವುಗಳೇ ಕೊಡುಗೆಯಾಗಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಿಡಮರಗಳನ್ನು ನೆಟ್ಟು ಬೆಳೆಸೋಣ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

2 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

5 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

6 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

8 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

9 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

10 hours ago