Categories: ಕೋಲಾರ

ಗಿಡ ಮರ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಎದುರಿಸಿದ ಸಮಸ್ಯೆಗಳು ನಮಗೆಲ್ಲ ಪಾಠವಾಗಿದೆ. ಪ್ರತಿಯೊಬ್ಬರೂ ಗಿಡ, ಮರಗಳ ಮಹತ್ವವನ್ನು ಅರಿತು ಪೋಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಕೆರೆಯಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನಡೆದ 2024 ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳು ಜೀವಿಸಲು ನೀರು ಮತ್ತು ಗಾಳಿ ಅತ್ಯವಶ್ಯಕವಾಗಿದೆ. ಮನುಷ್ಯನು ತನ್ನ ಸ್ವಾರ್ಥಕ್ಕೆ ಮರಗಿಡಗಳನ್ನು ನಾಶ ಮಾಡಲು ಹೊರಟಿದ್ದಾರೆ. ನಾಶ ಮಾಡುವುದು ಸುಲಭ ಆದರೆ ಬೆಳೆಸುವುದು ಕಷ್ಟ. ಯಾವುದೇ ಕಾರಣಕ್ಕೂ ಪರಿಸರವನ್ನು ನಾಶ ಮಾಡಬಾರದು ಮುಂದಿನ ಪೀಳಿಗೆಗಾಗಿ ಗಿಡಮರಗಳನ್ನು ಬೆಳೆಸಬೇಕಾಗಿದೆ ಎಂದರು.

ಪರಿಸರ ಉಳಿದರೆ ಮಾತ್ರ ನಮ್ಮ ಆಯಸ್ಸು ಜಾಸ್ತಿಯಾಗುತ್ತದೆ. ಪರಿಸರ ನಾಶ ಮಾಡಿದಷ್ಟು ನಮ್ಮ ಆಯಸ್ಸು ಕಡಿಮೆಯಾಗುತ್ತದೆ. ಅದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮರಗಿಡಗಳನ್ನು ಕಡಿದರೆ ತಮ್ಮ ಮಕ್ಕಳ ಕೈ ಕಡಿದಂತೆ ಆಗುತ್ತದೆ. ಸರ್ಕಾರಿ ಜಾಗದಲ್ಲಿ ಮತ್ತು ಶಾಲಾ ಕಾಲೇಜುಗಳ ಕಾಂಪೌಂಡ್ ಗಳಲ್ಲಿ ಹಣ್ಣಿನ ಗಿಡಗಳನ್ನು ಹಾಕಿದರೆ ತಿನ್ನಲು ಹಣ್ಣುಗಳು ಸಿಗುತ್ತವೆ ಜೊತೆಗೆ ಆಮ್ಲಜನಕವು ಹೆಚ್ಚಾಗುತ್ತದೆ ಇದರ ಬಗ್ಗೆ ಅರಣ್ಯ ಮತ್ತು ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಜುಲೈ 1 ರಿಂದ 7 ರವರೆಗೆ ಒಂದು ವಾರ ವನಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಸರಕಾರವು ಸಹ ಜವಾಬ್ದಾರಿ ನೀಡಿದೆ ಜನಸಂಖ್ಯೆ ಹೆಚ್ಚಾದಂತೆ ನಾವುಗಳು ಪರಿಸರವನ್ನು ನಾಶ ಮಾಡಿಕೊಂಡು ಬಂದಿದ್ದೇವೆ ಅದರ ದುಷ್ಪರಿಣಾಮವನ್ನು ಕೊರೊನಾ ಸಂದರ್ಭದಲ್ಲಿ ಅನುಭವಿಸಿದ್ದೇವೆ ಮುಂದೆ ಅಂತಹ ಸನ್ನಿವೇಶ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ ಪರಿಸರ ರಕ್ಷಣೆ ನಮ್ಮ ರಕ್ಷಣೆಯಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಪ್ರದೇಶದಲ್ಲಿ 33% ಅರಣ್ಯ ಅವಶ್ಯಕತೆ ಇದ್ದು, ಗ್ಲೋಬಲ್ ಯುಗದಿಂದ ಇದು 17 % ಅರಣ್ಯ ಮಾತ್ರ ಇದ್ದು ನಾವುಗಳೇ ಮಾಡಿದ ತಪ್ಪಿಗೆ ಅರಣ್ಯ ನಾಶವಾಗಿದೆ. ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಾವುಗಳೇ ಕೊಡುಗೆಯಾಗಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಿಡಮರಗಳನ್ನು ನೆಟ್ಟು ಬೆಳೆಸೋಣ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಾಧಿಕಾರಿ ಏಡುಕೊಂಡಲು ಮಾತನಾಡಿ, ಸರಕಾರವು ಪ್ರತಿ ವರ್ಷವೂ ವನಮಹೋತ್ಸವ ಹೆಸರಿನಲ್ಲಿ ಸಸಿಗಳನ್ನು ನೆಡುವ ಗುರಿಯನ್ನು ನೀಡಿದೆ ಪ್ರತಿ ಸರಕಾರಿ ಕಚೇರಿ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರು ಕೂಡ ಸ್ವಂತ ಜಮೀನಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡಬಹುದಾಗಿದೆ. ಇದಕ್ಕೆ ಸರಕಾರವು ಸಹಾಯ ಧನ ನೀಡುತ್ತದೆ ಗಿಡಗಳು ಭೂಮಿಯನ್ನು ರಕ್ಷಣೆ ಮಾಡುವ ಜೊತೆಗೆ ಉತ್ತಮ ಗಾಳಿಯನ್ನು ನೀಡುವಂತೆ ಮಾಡಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ, ಹೆಚ್ಚುವರಿ ಎಸ್ಪಿ ಜಗದೀಶ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಸಹಾಯಕ ಅರಣ್ಯಾಧಿಕಾರಿ ಸುಮಂತ್, ವಲಯ ಅರಣ್ಯಾಧಿಕಾರಿಗಳಾದ ಪುಷ್ಪಲತಾ, ಶಶಿಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಆಫ್ಸರ್, ವೈ ಶಿವಕುಮಾರ್ ಮುಂತಾದವರು ಇದ್ದರು

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

59 minutes ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

6 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago