ಗಿನ್ನಿಸ್ ದಾಖಲೆಗೆ ಲಗ್ಗೆ ಇಟ್ಟಿರೋ “ದೇವರ ಆಟ ಬಲ್ಲವರಾರು” ಸಿನಿಮಾ ಸಕಲ ಸಿದ್ಧತೆಯಾಗಿ ಚಿತ್ರಿಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಯಲ್ಲಿ ಚಿತ್ರದ ನಾಯಕ ನಟಿ ಸಿಂಧೂ ಲೋಕನಾಥ್ ಸತತ ಆರು ತಿಂಗಳಿನಿಂದ ತಾಲಿಮು ನಡೆಸುತ್ತಿದ್ದಾರೆ.
“ಪಿರಂಗಿಪುರ” ಸಿನಿಮಾ ಖ್ಯಾತಿಯ ಜನಾರ್ಧನ್.ಪಿ ಜಾನಿ ನಿರ್ದೇಶನ ಮಾಡುತ್ತಿದ್ದು, ಗಿನ್ನಿಸ್ ದಾಖಲೆಯ ಉದ್ದೇಶ ಇಟ್ಟುಕೊಂಡು ಆರಂಭಿಸಿರೊ ಈ ಸಿನಿಮಾ ಈಗಾಹಲೇ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.
ಮಡಿಕೇರಿಯಲ್ಲಿ “ಫಾಸ್ಟೆಸ್ಟ್ ಫೀಲ್ಮ್ ಸೆಟ್ ಕನ್ಸ್ಟ್ರಕ್ಷನ್” ಮಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಿನಿಮಾಕ್ಕಾಗಿ ಭರ್ಜರಿ ತಯಾರಿಯಲ್ಲಿರೋ ಸಿಂಧೂ ಲೋಕನಾಥ್, ಶೂಟಿಂಗ್ ಸ್ಥಳದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕ ಕೂತೂಹಲ ಅಂಶವನ್ನು ಹೊರಹಾಕಿದೆ.
ಸಿಂಧೂ ಲೋಕನಾಥ್ ಮೂರು ವರ್ಷಗಳ ಬಳಿಕ ಕಮ್ಬ್ಯಾಕ್ ಮಾಡಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಪಾತ್ರಕ್ಕಿಂತ ಭಿನ್ನವಾಗಿರಲಿದೆ ಎಂದಿದ್ದಾರೆ. ಶೂಟಿಂಗ್ ಲೊಕೇಷನ್, ಪಾತ್ರಕ್ಕೆ ಬೇಕಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.
ಮಡಿಕೇರಿಯಲ್ಲಿ ಸಂಪೂರ್ಣ ಚಿತ್ರೀಕರಣ ಮಾಡುವ ಪ್ಲಾನ್ ಹಾಕಿಕೊಂಡಿದೆ, ಚಿತ್ರಕ್ಕೆ ನಾಯಕ ನಟನಾಗಿ ಅರ್ಜುನ್ ರಮೇಶ್ ಬಣ್ಣ ಹಚ್ಚುತ್ತಿದ್ದು ಪಾತ್ರಕ್ಕಾಗಿ 14 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. 30 ದಿನಗಳಲ್ಲಿ ಶೂಟಿಂಗ್ ಮುಗಿಸಿ ತೆರೆಗೆ ತರುವ ಈ ಸಾಹಸ ಪ್ರಯತ್ನಕ್ಕೆ ಚಿತ್ರತಂಡ ಸಕಲ ಸಿದ್ಧತೆಯೊಂದಿಗೆ ಸನ್ನದ್ಧವಾಗಿದೆ.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…