Categories: ಸಿನಿಮಾ

ಗಿನ್ನಿಸ್ ಪುಟ ಸೇರಲು ಸಿಂಧೂ ಲೋಕನಾಥ್ ಭರ್ಜರಿ ತಯಾರಿ

ಗಿನ್ನಿಸ್ ದಾಖಲೆಗೆ ಲಗ್ಗೆ ಇಟ್ಟಿರೋ “ದೇವರ ಆಟ ಬಲ್ಲವರಾರು” ಸಿನಿಮಾ ಸಕಲ ಸಿದ್ಧತೆಯಾಗಿ ಚಿತ್ರಿಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಯಲ್ಲಿ ಚಿತ್ರದ ನಾಯಕ ನಟಿ ಸಿಂಧೂ ಲೋಕನಾಥ್ ಸತತ ಆರು ತಿಂಗಳಿನಿಂದ ತಾಲಿಮು ನಡೆಸುತ್ತಿದ್ದಾರೆ.

“ಪಿರಂಗಿಪುರ” ಸಿನಿಮಾ ಖ್ಯಾತಿಯ ಜನಾರ್ಧನ್.ಪಿ ಜಾನಿ ನಿರ್ದೇಶನ ಮಾಡುತ್ತಿದ್ದು, ಗಿನ್ನಿಸ್ ದಾಖಲೆಯ ಉದ್ದೇಶ ಇಟ್ಟುಕೊಂಡು ಆರಂಭಿಸಿರೊ ಈ ಸಿನಿಮಾ ಈಗಾಹಲೇ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.

ಮಡಿಕೇರಿಯಲ್ಲಿ “ಫಾಸ್ಟೆಸ್ಟ್ ಫೀಲ್ಮ್ ಸೆಟ್ ಕನ್ಸ್ಟ್ರಕ್ಷನ್” ಮಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಿನಿಮಾಕ್ಕಾಗಿ ಭರ್ಜರಿ ತಯಾರಿಯಲ್ಲಿರೋ ಸಿಂಧೂ ಲೋಕನಾಥ್, ಶೂಟಿಂಗ್ ಸ್ಥಳದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕ ಕೂತೂಹಲ ಅಂಶವನ್ನು ಹೊರಹಾಕಿದೆ.

ಸಿಂಧೂ ಲೋಕನಾಥ್ ಮೂರು ವರ್ಷಗಳ ಬಳಿಕ ಕಮ್‌ಬ್ಯಾಕ್ ಮಾಡಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಪಾತ್ರಕ್ಕಿಂತ ಭಿನ್ನವಾಗಿರಲಿದೆ ಎಂದಿದ್ದಾರೆ. ಶೂಟಿಂಗ್ ಲೊಕೇಷನ್, ಪಾತ್ರಕ್ಕೆ ಬೇಕಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.

ಮಡಿಕೇರಿಯಲ್ಲಿ ಸಂಪೂರ್ಣ ಚಿತ್ರೀಕರಣ ಮಾಡುವ ಪ್ಲಾನ್ ಹಾಕಿಕೊಂಡಿದೆ, ಚಿತ್ರಕ್ಕೆ ನಾಯಕ ನಟನಾಗಿ ಅರ್ಜುನ್ ರಮೇಶ್ ಬಣ್ಣ ಹಚ್ಚುತ್ತಿದ್ದು ಪಾತ್ರಕ್ಕಾಗಿ 14 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. 30 ದಿನಗಳಲ್ಲಿ ಶೂಟಿಂಗ್ ಮುಗಿಸಿ ತೆರೆಗೆ ತರುವ ಈ ಸಾಹಸ ಪ್ರಯತ್ನಕ್ಕೆ ಚಿತ್ರತಂಡ ಸಕಲ ಸಿದ್ಧತೆಯೊಂದಿಗೆ ಸನ್ನದ್ಧವಾಗಿದೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

5 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

6 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

8 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

10 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

12 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

17 hours ago