ಗಿನ್ನಿಸ್ ದಾಖಲೆಗೆ ಲಗ್ಗೆ ಇಟ್ಟಿರೋ “ದೇವರ ಆಟ ಬಲ್ಲವರಾರು” ಸಿನಿಮಾ ಸಕಲ ಸಿದ್ಧತೆಯಾಗಿ ಚಿತ್ರಿಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಯಲ್ಲಿ ಚಿತ್ರದ ನಾಯಕ ನಟಿ ಸಿಂಧೂ ಲೋಕನಾಥ್ ಸತತ ಆರು ತಿಂಗಳಿನಿಂದ ತಾಲಿಮು ನಡೆಸುತ್ತಿದ್ದಾರೆ.
“ಪಿರಂಗಿಪುರ” ಸಿನಿಮಾ ಖ್ಯಾತಿಯ ಜನಾರ್ಧನ್.ಪಿ ಜಾನಿ ನಿರ್ದೇಶನ ಮಾಡುತ್ತಿದ್ದು, ಗಿನ್ನಿಸ್ ದಾಖಲೆಯ ಉದ್ದೇಶ ಇಟ್ಟುಕೊಂಡು ಆರಂಭಿಸಿರೊ ಈ ಸಿನಿಮಾ ಈಗಾಹಲೇ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.
ಮಡಿಕೇರಿಯಲ್ಲಿ “ಫಾಸ್ಟೆಸ್ಟ್ ಫೀಲ್ಮ್ ಸೆಟ್ ಕನ್ಸ್ಟ್ರಕ್ಷನ್” ಮಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಿನಿಮಾಕ್ಕಾಗಿ ಭರ್ಜರಿ ತಯಾರಿಯಲ್ಲಿರೋ ಸಿಂಧೂ ಲೋಕನಾಥ್, ಶೂಟಿಂಗ್ ಸ್ಥಳದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕ ಕೂತೂಹಲ ಅಂಶವನ್ನು ಹೊರಹಾಕಿದೆ.
ಸಿಂಧೂ ಲೋಕನಾಥ್ ಮೂರು ವರ್ಷಗಳ ಬಳಿಕ ಕಮ್ಬ್ಯಾಕ್ ಮಾಡಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಪಾತ್ರಕ್ಕಿಂತ ಭಿನ್ನವಾಗಿರಲಿದೆ ಎಂದಿದ್ದಾರೆ. ಶೂಟಿಂಗ್ ಲೊಕೇಷನ್, ಪಾತ್ರಕ್ಕೆ ಬೇಕಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.
ಮಡಿಕೇರಿಯಲ್ಲಿ ಸಂಪೂರ್ಣ ಚಿತ್ರೀಕರಣ ಮಾಡುವ ಪ್ಲಾನ್ ಹಾಕಿಕೊಂಡಿದೆ, ಚಿತ್ರಕ್ಕೆ ನಾಯಕ ನಟನಾಗಿ ಅರ್ಜುನ್ ರಮೇಶ್ ಬಣ್ಣ ಹಚ್ಚುತ್ತಿದ್ದು ಪಾತ್ರಕ್ಕಾಗಿ 14 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. 30 ದಿನಗಳಲ್ಲಿ ಶೂಟಿಂಗ್ ಮುಗಿಸಿ ತೆರೆಗೆ ತರುವ ಈ ಸಾಹಸ ಪ್ರಯತ್ನಕ್ಕೆ ಚಿತ್ರತಂಡ ಸಕಲ ಸಿದ್ಧತೆಯೊಂದಿಗೆ ಸನ್ನದ್ಧವಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…