ಗಿನ್ನಿಸ್ ದಾಖಲೆಗೆ ಲಗ್ಗೆ ಇಟ್ಟಿರೋ “ದೇವರ ಆಟ ಬಲ್ಲವರಾರು” ಸಿನಿಮಾ ಸಕಲ ಸಿದ್ಧತೆಯಾಗಿ ಚಿತ್ರಿಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಯಲ್ಲಿ ಚಿತ್ರದ ನಾಯಕ ನಟಿ ಸಿಂಧೂ ಲೋಕನಾಥ್ ಸತತ ಆರು ತಿಂಗಳಿನಿಂದ ತಾಲಿಮು ನಡೆಸುತ್ತಿದ್ದಾರೆ.
“ಪಿರಂಗಿಪುರ” ಸಿನಿಮಾ ಖ್ಯಾತಿಯ ಜನಾರ್ಧನ್.ಪಿ ಜಾನಿ ನಿರ್ದೇಶನ ಮಾಡುತ್ತಿದ್ದು, ಗಿನ್ನಿಸ್ ದಾಖಲೆಯ ಉದ್ದೇಶ ಇಟ್ಟುಕೊಂಡು ಆರಂಭಿಸಿರೊ ಈ ಸಿನಿಮಾ ಈಗಾಹಲೇ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.
ಮಡಿಕೇರಿಯಲ್ಲಿ “ಫಾಸ್ಟೆಸ್ಟ್ ಫೀಲ್ಮ್ ಸೆಟ್ ಕನ್ಸ್ಟ್ರಕ್ಷನ್” ಮಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಿನಿಮಾಕ್ಕಾಗಿ ಭರ್ಜರಿ ತಯಾರಿಯಲ್ಲಿರೋ ಸಿಂಧೂ ಲೋಕನಾಥ್, ಶೂಟಿಂಗ್ ಸ್ಥಳದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕ ಕೂತೂಹಲ ಅಂಶವನ್ನು ಹೊರಹಾಕಿದೆ.
ಸಿಂಧೂ ಲೋಕನಾಥ್ ಮೂರು ವರ್ಷಗಳ ಬಳಿಕ ಕಮ್ಬ್ಯಾಕ್ ಮಾಡಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಪಾತ್ರಕ್ಕಿಂತ ಭಿನ್ನವಾಗಿರಲಿದೆ ಎಂದಿದ್ದಾರೆ. ಶೂಟಿಂಗ್ ಲೊಕೇಷನ್, ಪಾತ್ರಕ್ಕೆ ಬೇಕಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.
ಮಡಿಕೇರಿಯಲ್ಲಿ ಸಂಪೂರ್ಣ ಚಿತ್ರೀಕರಣ ಮಾಡುವ ಪ್ಲಾನ್ ಹಾಕಿಕೊಂಡಿದೆ, ಚಿತ್ರಕ್ಕೆ ನಾಯಕ ನಟನಾಗಿ ಅರ್ಜುನ್ ರಮೇಶ್ ಬಣ್ಣ ಹಚ್ಚುತ್ತಿದ್ದು ಪಾತ್ರಕ್ಕಾಗಿ 14 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. 30 ದಿನಗಳಲ್ಲಿ ಶೂಟಿಂಗ್ ಮುಗಿಸಿ ತೆರೆಗೆ ತರುವ ಈ ಸಾಹಸ ಪ್ರಯತ್ನಕ್ಕೆ ಚಿತ್ರತಂಡ ಸಕಲ ಸಿದ್ಧತೆಯೊಂದಿಗೆ ಸನ್ನದ್ಧವಾಗಿದೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…