ಗಿನ್ನಿಸ್ ದಾಖಲೆಗೆ ಲಗ್ಗೆ ಇಟ್ಟಿರೋ “ದೇವರ ಆಟ ಬಲ್ಲವರಾರು” ಸಿನಿಮಾ ಸಕಲ ಸಿದ್ಧತೆಯಾಗಿ ಚಿತ್ರಿಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಯಲ್ಲಿ ಚಿತ್ರದ ನಾಯಕ ನಟಿ ಸಿಂಧೂ ಲೋಕನಾಥ್ ಸತತ ಆರು ತಿಂಗಳಿನಿಂದ ತಾಲಿಮು ನಡೆಸುತ್ತಿದ್ದಾರೆ.
“ಪಿರಂಗಿಪುರ” ಸಿನಿಮಾ ಖ್ಯಾತಿಯ ಜನಾರ್ಧನ್.ಪಿ ಜಾನಿ ನಿರ್ದೇಶನ ಮಾಡುತ್ತಿದ್ದು, ಗಿನ್ನಿಸ್ ದಾಖಲೆಯ ಉದ್ದೇಶ ಇಟ್ಟುಕೊಂಡು ಆರಂಭಿಸಿರೊ ಈ ಸಿನಿಮಾ ಈಗಾಹಲೇ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.
ಮಡಿಕೇರಿಯಲ್ಲಿ “ಫಾಸ್ಟೆಸ್ಟ್ ಫೀಲ್ಮ್ ಸೆಟ್ ಕನ್ಸ್ಟ್ರಕ್ಷನ್” ಮಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಿನಿಮಾಕ್ಕಾಗಿ ಭರ್ಜರಿ ತಯಾರಿಯಲ್ಲಿರೋ ಸಿಂಧೂ ಲೋಕನಾಥ್, ಶೂಟಿಂಗ್ ಸ್ಥಳದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕ ಕೂತೂಹಲ ಅಂಶವನ್ನು ಹೊರಹಾಕಿದೆ.
ಸಿಂಧೂ ಲೋಕನಾಥ್ ಮೂರು ವರ್ಷಗಳ ಬಳಿಕ ಕಮ್ಬ್ಯಾಕ್ ಮಾಡಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಪಾತ್ರಕ್ಕಿಂತ ಭಿನ್ನವಾಗಿರಲಿದೆ ಎಂದಿದ್ದಾರೆ. ಶೂಟಿಂಗ್ ಲೊಕೇಷನ್, ಪಾತ್ರಕ್ಕೆ ಬೇಕಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.
ಮಡಿಕೇರಿಯಲ್ಲಿ ಸಂಪೂರ್ಣ ಚಿತ್ರೀಕರಣ ಮಾಡುವ ಪ್ಲಾನ್ ಹಾಕಿಕೊಂಡಿದೆ, ಚಿತ್ರಕ್ಕೆ ನಾಯಕ ನಟನಾಗಿ ಅರ್ಜುನ್ ರಮೇಶ್ ಬಣ್ಣ ಹಚ್ಚುತ್ತಿದ್ದು ಪಾತ್ರಕ್ಕಾಗಿ 14 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. 30 ದಿನಗಳಲ್ಲಿ ಶೂಟಿಂಗ್ ಮುಗಿಸಿ ತೆರೆಗೆ ತರುವ ಈ ಸಾಹಸ ಪ್ರಯತ್ನಕ್ಕೆ ಚಿತ್ರತಂಡ ಸಕಲ ಸಿದ್ಧತೆಯೊಂದಿಗೆ ಸನ್ನದ್ಧವಾಗಿದೆ.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…