ಗಿನ್ನಿಸ್ ದಾಖಲೆಗೆ ಲಗ್ಗೆ ಇಟ್ಟಿರೋ “ದೇವರ ಆಟ ಬಲ್ಲವರಾರು” ಸಿನಿಮಾ ಸಕಲ ಸಿದ್ಧತೆಯಾಗಿ ಚಿತ್ರಿಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಯಲ್ಲಿ ಚಿತ್ರದ ನಾಯಕ ನಟಿ ಸಿಂಧೂ ಲೋಕನಾಥ್ ಸತತ ಆರು ತಿಂಗಳಿನಿಂದ ತಾಲಿಮು ನಡೆಸುತ್ತಿದ್ದಾರೆ.
“ಪಿರಂಗಿಪುರ” ಸಿನಿಮಾ ಖ್ಯಾತಿಯ ಜನಾರ್ಧನ್.ಪಿ ಜಾನಿ ನಿರ್ದೇಶನ ಮಾಡುತ್ತಿದ್ದು, ಗಿನ್ನಿಸ್ ದಾಖಲೆಯ ಉದ್ದೇಶ ಇಟ್ಟುಕೊಂಡು ಆರಂಭಿಸಿರೊ ಈ ಸಿನಿಮಾ ಈಗಾಹಲೇ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.
ಮಡಿಕೇರಿಯಲ್ಲಿ “ಫಾಸ್ಟೆಸ್ಟ್ ಫೀಲ್ಮ್ ಸೆಟ್ ಕನ್ಸ್ಟ್ರಕ್ಷನ್” ಮಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಿನಿಮಾಕ್ಕಾಗಿ ಭರ್ಜರಿ ತಯಾರಿಯಲ್ಲಿರೋ ಸಿಂಧೂ ಲೋಕನಾಥ್, ಶೂಟಿಂಗ್ ಸ್ಥಳದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕ ಕೂತೂಹಲ ಅಂಶವನ್ನು ಹೊರಹಾಕಿದೆ.
ಸಿಂಧೂ ಲೋಕನಾಥ್ ಮೂರು ವರ್ಷಗಳ ಬಳಿಕ ಕಮ್ಬ್ಯಾಕ್ ಮಾಡಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಪಾತ್ರಕ್ಕಿಂತ ಭಿನ್ನವಾಗಿರಲಿದೆ ಎಂದಿದ್ದಾರೆ. ಶೂಟಿಂಗ್ ಲೊಕೇಷನ್, ಪಾತ್ರಕ್ಕೆ ಬೇಕಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.
ಮಡಿಕೇರಿಯಲ್ಲಿ ಸಂಪೂರ್ಣ ಚಿತ್ರೀಕರಣ ಮಾಡುವ ಪ್ಲಾನ್ ಹಾಕಿಕೊಂಡಿದೆ, ಚಿತ್ರಕ್ಕೆ ನಾಯಕ ನಟನಾಗಿ ಅರ್ಜುನ್ ರಮೇಶ್ ಬಣ್ಣ ಹಚ್ಚುತ್ತಿದ್ದು ಪಾತ್ರಕ್ಕಾಗಿ 14 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. 30 ದಿನಗಳಲ್ಲಿ ಶೂಟಿಂಗ್ ಮುಗಿಸಿ ತೆರೆಗೆ ತರುವ ಈ ಸಾಹಸ ಪ್ರಯತ್ನಕ್ಕೆ ಚಿತ್ರತಂಡ ಸಕಲ ಸಿದ್ಧತೆಯೊಂದಿಗೆ ಸನ್ನದ್ಧವಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…