ಗಿನ್ನಿಸ್ ದಾಖಲೆಗೆ ಲಗ್ಗೆ ಇಟ್ಟಿರೋ “ದೇವರ ಆಟ ಬಲ್ಲವರಾರು” ಸಿನಿಮಾ ಸಕಲ ಸಿದ್ಧತೆಯಾಗಿ ಚಿತ್ರಿಕರಣಕ್ಕೆ ಸಜ್ಜಾಗಿದೆ. ಈ ಹಿನ್ನೆಯಲ್ಲಿ ಚಿತ್ರದ ನಾಯಕ ನಟಿ ಸಿಂಧೂ ಲೋಕನಾಥ್ ಸತತ ಆರು ತಿಂಗಳಿನಿಂದ ತಾಲಿಮು ನಡೆಸುತ್ತಿದ್ದಾರೆ.
“ಪಿರಂಗಿಪುರ” ಸಿನಿಮಾ ಖ್ಯಾತಿಯ ಜನಾರ್ಧನ್.ಪಿ ಜಾನಿ ನಿರ್ದೇಶನ ಮಾಡುತ್ತಿದ್ದು, ಗಿನ್ನಿಸ್ ದಾಖಲೆಯ ಉದ್ದೇಶ ಇಟ್ಟುಕೊಂಡು ಆರಂಭಿಸಿರೊ ಈ ಸಿನಿಮಾ ಈಗಾಹಲೇ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.
ಮಡಿಕೇರಿಯಲ್ಲಿ “ಫಾಸ್ಟೆಸ್ಟ್ ಫೀಲ್ಮ್ ಸೆಟ್ ಕನ್ಸ್ಟ್ರಕ್ಷನ್” ಮಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಿನಿಮಾಕ್ಕಾಗಿ ಭರ್ಜರಿ ತಯಾರಿಯಲ್ಲಿರೋ ಸಿಂಧೂ ಲೋಕನಾಥ್, ಶೂಟಿಂಗ್ ಸ್ಥಳದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಅನೇಕ ಕೂತೂಹಲ ಅಂಶವನ್ನು ಹೊರಹಾಕಿದೆ.
ಸಿಂಧೂ ಲೋಕನಾಥ್ ಮೂರು ವರ್ಷಗಳ ಬಳಿಕ ಕಮ್ಬ್ಯಾಕ್ ಮಾಡಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಮಾತನಾಡಿ, ಈ ಹಿಂದಿನ ಪಾತ್ರಕ್ಕಿಂತ ಭಿನ್ನವಾಗಿರಲಿದೆ ಎಂದಿದ್ದಾರೆ. ಶೂಟಿಂಗ್ ಲೊಕೇಷನ್, ಪಾತ್ರಕ್ಕೆ ಬೇಕಾದ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ.
ಮಡಿಕೇರಿಯಲ್ಲಿ ಸಂಪೂರ್ಣ ಚಿತ್ರೀಕರಣ ಮಾಡುವ ಪ್ಲಾನ್ ಹಾಕಿಕೊಂಡಿದೆ, ಚಿತ್ರಕ್ಕೆ ನಾಯಕ ನಟನಾಗಿ ಅರ್ಜುನ್ ರಮೇಶ್ ಬಣ್ಣ ಹಚ್ಚುತ್ತಿದ್ದು ಪಾತ್ರಕ್ಕಾಗಿ 14 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. 30 ದಿನಗಳಲ್ಲಿ ಶೂಟಿಂಗ್ ಮುಗಿಸಿ ತೆರೆಗೆ ತರುವ ಈ ಸಾಹಸ ಪ್ರಯತ್ನಕ್ಕೆ ಚಿತ್ರತಂಡ ಸಕಲ ಸಿದ್ಧತೆಯೊಂದಿಗೆ ಸನ್ನದ್ಧವಾಗಿದೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…