ಗೀತಂನಲ್ಲಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರ ಉದ್ಘಾಟನೆ

 

ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಎಂಜಿನಿಯರಿಂಗ್ ಕಾಲಿನ್ಸ್ ಏರೋಸ್ಪೇಸ್ ನ ಉಪಾಧ್ಯಕ್ಷ ಸವ್ಯಸಾಚಿ ಶ್ರೀನಿವಾಸ್ ಅವರು ಉದ್ಘಾಟನೆ ಮಾಡಿದರು.

ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಗೀತಂ ಯೂನಿರ್ವಸಿಟಿಯ ಉಪಕುಲಪತಿ ಪ್ರೊ. ಕೆ.ಎನ್ ಎಸ್ ಆರ್ಚಾಯ ಮಾತನಾಡಿ, ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಉಪಯೋಗವಾಗಲಿದೆ. ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೋರ್ಸ್ ಮುಗಿಯುವದೊಳಗೆ ಒಳ್ಳೆ ಸಂಬಳ ಸಿಗುವ ಕೆಲಸ ಪಡೆಯಬಹುದು ಎಂದರು.

ಸಿರೆನಾ ಟೆಕ್ನೋಲಾಜೀಸ್ ಕಂಪನಿಗೆ ನಮ್ಮ ಕಾಲೇಜಿನಿಂದ ಈಗಾಗಲೇ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದು ನಮ್ಮ ಯೂನಿರ್ವಸಿಟೆಗೆ ಹೆಮ್ಮೆಯ ಸಂಗತಿ. ಮುಂದೆ ಈ ಕೋರ್ಸ್ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸಿಗುವಂತೆ ಆಗಲಿ ಎಂದು ಆಶಿಸಿದರು.

ನಾಲ್ಕು ವರ್ಷಗಳ ರೋಬೋಟಿಕ್ ಮತ್ತು ಎಐ ಇಂಟೆಲಿಜೆನ್ಸ್ ಕೋರ್ಸ್ ವಿದ್ಯಾರ್ಥಿಗಳನ್ನು ಪರಿಗಣಿತರಾಗಿಸುವುದಷ್ಟೇ ಅಲ್ಲದೇ ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರಯೋಗಿಕವಾಗಿ ರೋಬೋಟಿಕ್ ಸೈನ್ಸ್ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನಮ್ಮ ಗೀತಂ ವಿಶ್ವವಿದ್ಯಾಲಯವು ನೂತನ ಪ್ರಯತ್ನಕ್ಕೆ ಮುಂದಾಗಿದ್ದು, ನಮ್ಮ ಪ್ರಯತ್ನಕ್ಕೆ ಸಿರೆನಾ ಟೆಕ್ನೋಲಾಜೀಸ್ ಸಹಕಾರ ನೀಡಿದೆ ಎಂದರು.

ವಿದ್ಯಾರ್ಥಿಗಳನ್ನು ಕಲಿಕಾ ಹಂತದಲ್ಲೇ ಪ್ರಾಯೋಗಿಕವಾಗಿ ಪರಿಣಿತಿಪಡೆಯಲು ಸಹಕಾರಿಯಾಗಿದೆ. ಸತತ ಮೂರು ತಿಂಗಳ ನಮ್ಮೆಲ್ಲರ ಪ್ರಯತ್ನ‌ ಇಂದು ಇದು ಫಲದಾಯಕವಾಗಿದೆ ಎಂದರು.

ಈ ವೇಳೆ ಸಿರೆನಾ ಟೆಕ್ನೋಲಾಜೀಸ್ ನ ಹರಿಹರನ್ ಭೋಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

4 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

5 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

18 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

19 hours ago