ಗೀತಂನಲ್ಲಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರ ಉದ್ಘಾಟನೆ

 

ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಎಂಜಿನಿಯರಿಂಗ್ ಕಾಲಿನ್ಸ್ ಏರೋಸ್ಪೇಸ್ ನ ಉಪಾಧ್ಯಕ್ಷ ಸವ್ಯಸಾಚಿ ಶ್ರೀನಿವಾಸ್ ಅವರು ಉದ್ಘಾಟನೆ ಮಾಡಿದರು.

ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಗೀತಂ ಯೂನಿರ್ವಸಿಟಿಯ ಉಪಕುಲಪತಿ ಪ್ರೊ. ಕೆ.ಎನ್ ಎಸ್ ಆರ್ಚಾಯ ಮಾತನಾಡಿ, ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಉಪಯೋಗವಾಗಲಿದೆ. ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೋರ್ಸ್ ಮುಗಿಯುವದೊಳಗೆ ಒಳ್ಳೆ ಸಂಬಳ ಸಿಗುವ ಕೆಲಸ ಪಡೆಯಬಹುದು ಎಂದರು.

ಸಿರೆನಾ ಟೆಕ್ನೋಲಾಜೀಸ್ ಕಂಪನಿಗೆ ನಮ್ಮ ಕಾಲೇಜಿನಿಂದ ಈಗಾಗಲೇ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದು ನಮ್ಮ ಯೂನಿರ್ವಸಿಟೆಗೆ ಹೆಮ್ಮೆಯ ಸಂಗತಿ. ಮುಂದೆ ಈ ಕೋರ್ಸ್ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸಿಗುವಂತೆ ಆಗಲಿ ಎಂದು ಆಶಿಸಿದರು.

ನಾಲ್ಕು ವರ್ಷಗಳ ರೋಬೋಟಿಕ್ ಮತ್ತು ಎಐ ಇಂಟೆಲಿಜೆನ್ಸ್ ಕೋರ್ಸ್ ವಿದ್ಯಾರ್ಥಿಗಳನ್ನು ಪರಿಗಣಿತರಾಗಿಸುವುದಷ್ಟೇ ಅಲ್ಲದೇ ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರಯೋಗಿಕವಾಗಿ ರೋಬೋಟಿಕ್ ಸೈನ್ಸ್ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನಮ್ಮ ಗೀತಂ ವಿಶ್ವವಿದ್ಯಾಲಯವು ನೂತನ ಪ್ರಯತ್ನಕ್ಕೆ ಮುಂದಾಗಿದ್ದು, ನಮ್ಮ ಪ್ರಯತ್ನಕ್ಕೆ ಸಿರೆನಾ ಟೆಕ್ನೋಲಾಜೀಸ್ ಸಹಕಾರ ನೀಡಿದೆ ಎಂದರು.

ವಿದ್ಯಾರ್ಥಿಗಳನ್ನು ಕಲಿಕಾ ಹಂತದಲ್ಲೇ ಪ್ರಾಯೋಗಿಕವಾಗಿ ಪರಿಣಿತಿಪಡೆಯಲು ಸಹಕಾರಿಯಾಗಿದೆ. ಸತತ ಮೂರು ತಿಂಗಳ ನಮ್ಮೆಲ್ಲರ ಪ್ರಯತ್ನ‌ ಇಂದು ಇದು ಫಲದಾಯಕವಾಗಿದೆ ಎಂದರು.

ಈ ವೇಳೆ ಸಿರೆನಾ ಟೆಕ್ನೋಲಾಜೀಸ್ ನ ಹರಿಹರನ್ ಭೋಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago