ಗೀತಂನಲ್ಲಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರ ಉದ್ಘಾಟನೆ

 

ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಎಂಜಿನಿಯರಿಂಗ್ ಕಾಲಿನ್ಸ್ ಏರೋಸ್ಪೇಸ್ ನ ಉಪಾಧ್ಯಕ್ಷ ಸವ್ಯಸಾಚಿ ಶ್ರೀನಿವಾಸ್ ಅವರು ಉದ್ಘಾಟನೆ ಮಾಡಿದರು.

ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಗೀತಂ ಯೂನಿರ್ವಸಿಟಿಯ ಉಪಕುಲಪತಿ ಪ್ರೊ. ಕೆ.ಎನ್ ಎಸ್ ಆರ್ಚಾಯ ಮಾತನಾಡಿ, ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಉಪಯೋಗವಾಗಲಿದೆ. ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೋರ್ಸ್ ಮುಗಿಯುವದೊಳಗೆ ಒಳ್ಳೆ ಸಂಬಳ ಸಿಗುವ ಕೆಲಸ ಪಡೆಯಬಹುದು ಎಂದರು.

ಸಿರೆನಾ ಟೆಕ್ನೋಲಾಜೀಸ್ ಕಂಪನಿಗೆ ನಮ್ಮ ಕಾಲೇಜಿನಿಂದ ಈಗಾಗಲೇ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದು ನಮ್ಮ ಯೂನಿರ್ವಸಿಟೆಗೆ ಹೆಮ್ಮೆಯ ಸಂಗತಿ. ಮುಂದೆ ಈ ಕೋರ್ಸ್ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸಿಗುವಂತೆ ಆಗಲಿ ಎಂದು ಆಶಿಸಿದರು.

ನಾಲ್ಕು ವರ್ಷಗಳ ರೋಬೋಟಿಕ್ ಮತ್ತು ಎಐ ಇಂಟೆಲಿಜೆನ್ಸ್ ಕೋರ್ಸ್ ವಿದ್ಯಾರ್ಥಿಗಳನ್ನು ಪರಿಗಣಿತರಾಗಿಸುವುದಷ್ಟೇ ಅಲ್ಲದೇ ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರಯೋಗಿಕವಾಗಿ ರೋಬೋಟಿಕ್ ಸೈನ್ಸ್ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನಮ್ಮ ಗೀತಂ ವಿಶ್ವವಿದ್ಯಾಲಯವು ನೂತನ ಪ್ರಯತ್ನಕ್ಕೆ ಮುಂದಾಗಿದ್ದು, ನಮ್ಮ ಪ್ರಯತ್ನಕ್ಕೆ ಸಿರೆನಾ ಟೆಕ್ನೋಲಾಜೀಸ್ ಸಹಕಾರ ನೀಡಿದೆ ಎಂದರು.

ವಿದ್ಯಾರ್ಥಿಗಳನ್ನು ಕಲಿಕಾ ಹಂತದಲ್ಲೇ ಪ್ರಾಯೋಗಿಕವಾಗಿ ಪರಿಣಿತಿಪಡೆಯಲು ಸಹಕಾರಿಯಾಗಿದೆ. ಸತತ ಮೂರು ತಿಂಗಳ ನಮ್ಮೆಲ್ಲರ ಪ್ರಯತ್ನ‌ ಇಂದು ಇದು ಫಲದಾಯಕವಾಗಿದೆ ಎಂದರು.

ಈ ವೇಳೆ ಸಿರೆನಾ ಟೆಕ್ನೋಲಾಜೀಸ್ ನ ಹರಿಹರನ್ ಭೋಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

9 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

10 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

10 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

11 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

14 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

14 hours ago