ಗೀತಂನಲ್ಲಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರ ಉದ್ಘಾಟನೆ

 

ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಎಂಜಿನಿಯರಿಂಗ್ ಕಾಲಿನ್ಸ್ ಏರೋಸ್ಪೇಸ್ ನ ಉಪಾಧ್ಯಕ್ಷ ಸವ್ಯಸಾಚಿ ಶ್ರೀನಿವಾಸ್ ಅವರು ಉದ್ಘಾಟನೆ ಮಾಡಿದರು.

ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಗೀತಂ ಯೂನಿರ್ವಸಿಟಿಯ ಉಪಕುಲಪತಿ ಪ್ರೊ. ಕೆ.ಎನ್ ಎಸ್ ಆರ್ಚಾಯ ಮಾತನಾಡಿ, ಗೀತಂ ಯೂನಿರ್ವಸಿಟಿಯಲ್ಲಿ ಸಿರೆನಾ ಟೆಕ್ನೋಲಾಜೀಸ್ ಸಹಭಾಗಿತ್ವದಲ್ಲಿ ನೂತನವಾಗಿ ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೇಂದ್ರವನ್ನು ಪ್ರಾರಂಭ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಉಪಯೋಗವಾಗಲಿದೆ. ರೊಬೋಟಿಕ್‌, ಆರ್ಟಿಫಿಷಿಯಲ್ ಆರ್ &‌ ಡಿ ಕೋರ್ಸ್ ಮುಗಿಯುವದೊಳಗೆ ಒಳ್ಳೆ ಸಂಬಳ ಸಿಗುವ ಕೆಲಸ ಪಡೆಯಬಹುದು ಎಂದರು.

ಸಿರೆನಾ ಟೆಕ್ನೋಲಾಜೀಸ್ ಕಂಪನಿಗೆ ನಮ್ಮ ಕಾಲೇಜಿನಿಂದ ಈಗಾಗಲೇ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದು ನಮ್ಮ ಯೂನಿರ್ವಸಿಟೆಗೆ ಹೆಮ್ಮೆಯ ಸಂಗತಿ. ಮುಂದೆ ಈ ಕೋರ್ಸ್ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಸಿಗುವಂತೆ ಆಗಲಿ ಎಂದು ಆಶಿಸಿದರು.

ನಾಲ್ಕು ವರ್ಷಗಳ ರೋಬೋಟಿಕ್ ಮತ್ತು ಎಐ ಇಂಟೆಲಿಜೆನ್ಸ್ ಕೋರ್ಸ್ ವಿದ್ಯಾರ್ಥಿಗಳನ್ನು ಪರಿಗಣಿತರಾಗಿಸುವುದಷ್ಟೇ ಅಲ್ಲದೇ ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರಯೋಗಿಕವಾಗಿ ರೋಬೋಟಿಕ್ ಸೈನ್ಸ್ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನಮ್ಮ ಗೀತಂ ವಿಶ್ವವಿದ್ಯಾಲಯವು ನೂತನ ಪ್ರಯತ್ನಕ್ಕೆ ಮುಂದಾಗಿದ್ದು, ನಮ್ಮ ಪ್ರಯತ್ನಕ್ಕೆ ಸಿರೆನಾ ಟೆಕ್ನೋಲಾಜೀಸ್ ಸಹಕಾರ ನೀಡಿದೆ ಎಂದರು.

ವಿದ್ಯಾರ್ಥಿಗಳನ್ನು ಕಲಿಕಾ ಹಂತದಲ್ಲೇ ಪ್ರಾಯೋಗಿಕವಾಗಿ ಪರಿಣಿತಿಪಡೆಯಲು ಸಹಕಾರಿಯಾಗಿದೆ. ಸತತ ಮೂರು ತಿಂಗಳ ನಮ್ಮೆಲ್ಲರ ಪ್ರಯತ್ನ‌ ಇಂದು ಇದು ಫಲದಾಯಕವಾಗಿದೆ ಎಂದರು.

ಈ ವೇಳೆ ಸಿರೆನಾ ಟೆಕ್ನೋಲಾಜೀಸ್ ನ ಹರಿಹರನ್ ಭೋಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 minutes ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 hour ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

10 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago