ಗೀತಂ ಯೂನಿವರ್ಸಿಟಿಯಲ್ಲಿ ಪ್ರಸಿದ್ಧ ಪ್ರಸಿದ್ಧ ಅಸ್ಸಾಮಿ ನೃತ್ಯಶಿಲ್ಪಿ ಡಾ.ಅನ್ವೇಸಾ ಮಹಂತ‌ ಅವರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಗೀತಂ ಯೂನಿವರ್ಸಿಟಿಯಲ್ಲಿ SPICMACAY (ಯುವ ಸಮುದಾಯದ ನಡುವೆ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಸಂಘ) ಕ್ಲಬ್ ವತಿಯಿಂದ ಇಂದು ಪ್ರಸಿದ್ಧ ಅಸ್ಸಾಮಿ ನೃತ್ಯಶಿಲ್ಪಿ ಡಾ. ಅನ್ವೇಸಾ ಮಹಂತ ಅವರ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮೂಲದ ಶಾಸ್ತ್ರೀಯ ನೃತ್ಯ ರೂಪ ಸತ್ರೀಯ ನೃತ್ಯದ ಮನೋಹರ ಪ್ರದರ್ಶನವಿತ್ತು, ಇದು ಸೂಕ್ಷ್ಮ ಪಾದಚಲನ, ಸೌಮ್ಯ ಭಾವಾಭಿನಯ ಮತ್ತು ಕಥನಾತ್ಮಕ ಶೈಲಿಗೆ ಪ್ರಸಿದ್ಧವಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಡಾ.ಮಹಂತ ಅವರ ನೃತ್ಯ ಪ್ರದರ್ಶನ ಮೂಲಕ ಅಸ್ಸಾಂನ ಸಮೃದ್ಧವಾದ ಸಾಂಸ್ಕೃತಿಕ ಪರಂಪರೆಯನ್ನು ತಿಳಿದುಕೊಂಡರು.

ನೃತ್ಯ ಪ್ರದರ್ಶನದ ನಂತರ, ಡಾ. ಮಹಂತ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿದ್ದರು. ತಮ್ಮ ಸತ್ರೀಯ ನೃತ್ಯ ಯಾತ್ರೆ, ನೃತ್ಯ ರೂಪದ ವಿಶಿಷ್ಟತೆಗಳು ಮತ್ತು ಭಾರತೀಯ ಶಾಸ್ತ್ರೀಯ ಕಲೆಯನ್ನು ಉಳಿಸುವ ಹಾಗೂ ಪ್ರಚಾರ ಮಾಡುವ ಮಹತ್ವವನ್ನು ಹಂಚಿಕೊಂಡರು.

ಯುವ ಸಮುದಾಯದ ನಡುವೆ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ಸಂಸ್ಕೃತಿಯನ್ನು ಹತ್ತಿರವಾಗಿ ಪರಿಚಯಿಸುವ SPICMACAY, ವಿದ್ಯಾರ್ಥಿಗಳಿಗೆ ವಿಶ್ವ ಮಟ್ಟದ ಪ್ರದರ್ಶನಗಳನ್ನು ಅನುಭವಿಸಲು ಮತ್ತು ಭಾರತದ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕ ಸಾಧಿಸಲು ಅವಕಾಶ ನೀಡುತ್ತಿದೆ.

ಈ ಕಾರ್ಯಕ್ರಮದಲ್ಲಿ ಗೀತಂ ಯೂನಿವರ್ಸಿಟಿಯ ಕ್ಯಾಂಪಸ್ ಲೈಫ್ ನಿರ್ದೇಶಕಿ ರೀಮಾ ಚೌಧರಿ, ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಭಾಗವಹಿಸಿದ್ದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

8 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

21 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

1 day ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago