ಗೀತಂ ಯೂನಿವರ್ಸಿಟಿಯಲ್ಲಿ ಪ್ರಸಿದ್ಧ ಪ್ರಸಿದ್ಧ ಅಸ್ಸಾಮಿ ನೃತ್ಯಶಿಲ್ಪಿ ಡಾ.ಅನ್ವೇಸಾ ಮಹಂತ‌ ಅವರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಗೀತಂ ಯೂನಿವರ್ಸಿಟಿಯಲ್ಲಿ SPICMACAY (ಯುವ ಸಮುದಾಯದ ನಡುವೆ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಸಂಘ) ಕ್ಲಬ್ ವತಿಯಿಂದ ಇಂದು ಪ್ರಸಿದ್ಧ ಅಸ್ಸಾಮಿ ನೃತ್ಯಶಿಲ್ಪಿ ಡಾ. ಅನ್ವೇಸಾ ಮಹಂತ ಅವರ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮೂಲದ ಶಾಸ್ತ್ರೀಯ ನೃತ್ಯ ರೂಪ ಸತ್ರೀಯ ನೃತ್ಯದ ಮನೋಹರ ಪ್ರದರ್ಶನವಿತ್ತು, ಇದು ಸೂಕ್ಷ್ಮ ಪಾದಚಲನ, ಸೌಮ್ಯ ಭಾವಾಭಿನಯ ಮತ್ತು ಕಥನಾತ್ಮಕ ಶೈಲಿಗೆ ಪ್ರಸಿದ್ಧವಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಡಾ.ಮಹಂತ ಅವರ ನೃತ್ಯ ಪ್ರದರ್ಶನ ಮೂಲಕ ಅಸ್ಸಾಂನ ಸಮೃದ್ಧವಾದ ಸಾಂಸ್ಕೃತಿಕ ಪರಂಪರೆಯನ್ನು ತಿಳಿದುಕೊಂಡರು.

ನೃತ್ಯ ಪ್ರದರ್ಶನದ ನಂತರ, ಡಾ. ಮಹಂತ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿದ್ದರು. ತಮ್ಮ ಸತ್ರೀಯ ನೃತ್ಯ ಯಾತ್ರೆ, ನೃತ್ಯ ರೂಪದ ವಿಶಿಷ್ಟತೆಗಳು ಮತ್ತು ಭಾರತೀಯ ಶಾಸ್ತ್ರೀಯ ಕಲೆಯನ್ನು ಉಳಿಸುವ ಹಾಗೂ ಪ್ರಚಾರ ಮಾಡುವ ಮಹತ್ವವನ್ನು ಹಂಚಿಕೊಂಡರು.

ಯುವ ಸಮುದಾಯದ ನಡುವೆ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ಸಂಸ್ಕೃತಿಯನ್ನು ಹತ್ತಿರವಾಗಿ ಪರಿಚಯಿಸುವ SPICMACAY, ವಿದ್ಯಾರ್ಥಿಗಳಿಗೆ ವಿಶ್ವ ಮಟ್ಟದ ಪ್ರದರ್ಶನಗಳನ್ನು ಅನುಭವಿಸಲು ಮತ್ತು ಭಾರತದ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕ ಸಾಧಿಸಲು ಅವಕಾಶ ನೀಡುತ್ತಿದೆ.

ಈ ಕಾರ್ಯಕ್ರಮದಲ್ಲಿ ಗೀತಂ ಯೂನಿವರ್ಸಿಟಿಯ ಕ್ಯಾಂಪಸ್ ಲೈಫ್ ನಿರ್ದೇಶಕಿ ರೀಮಾ ಚೌಧರಿ, ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಭಾಗವಹಿಸಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

48 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago