ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ ಓದಿದರೆ ಒಳ್ಳೆ ಮನೆಗೆ ಕೊಟ್ಟು ಮದುವೆ ಮಾಡಬಹುದು ಎಂದು ಕನಸು ಕಂಡು,‌ ಇಂಜಿನಿಯರಿಂಗ್ ವ್ಯಾಸಾಂಗ ಮಾಡಲು ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಆದರೆ ಆಕೆಗೆ ಅದೇನಾಯ್ತೋ ಏನೋ ಗೊತ್ತಿಲ್ಲ. ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೌದು ಹೀಗೆ 13 ನೇ ಮಹಡಿಯಿಂದ ಕೆಳಗೆ ಬಿದ್ದಿರುವ ಯುವತಿ, ಅಯ್ಯೋ ಮಗಳಿಗೆ ಏನಾಯ್ತೋ ಏನೋ ಅಂತಾ ಶವಾಗಾರದ ಮುಂದೆ ಬಂದಿರುವ ಕುಟುಂಬಸ್ಥರು. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಶವಾಗಾರದ ಮುಂದೆ. ಹೌದು ಪ್ರತಿಷ್ಠಿತ ಗೀತಂ ಯೂನಿವರ್ಸಿಟಿಯಲ್ಲಿ ನೆನ್ನೆ 13 ನೇ ಮಹಡಿಯಿಂದ ನಯನಾ (19) ಎಂಬ ಯುವತಿ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಬ್ಬಕ್ಕೆ ಎಂದು ಮನೆಗೆ ಹೋಗಿದ್ದ ನಯನಾ ಫೆ.15 ರಂದು ಮತ್ತು ಕಾಲೇಜಿಗೆ ಬಂದಿದ್ದಳು. ನಗು ನಗುತ್ತಾ ಮಗಳನ್ನು ಕಾಲೇಜಿಗೆ ಬಿಟ್ಟು ಹೋಗಿದ್ದ ಪೋಷಕರಿಗೆ ರಾತ್ರಿ ಕಳೆದು ಹಗಲು ಆಗುತ್ತಿದ್ದಂತೆ ಮಗಳ ಸಾವಿನ ಸುದ್ದಿ ಬಂದಿದೆ.

ಇನ್ನೂ ಮನೆಗೆ ಇದ್ದ ಏಕೈಕ‌ ಮಗಳು ನಯನಾ. ಹಾಗಾಗಿಯೇ ಒಳ್ಳೆಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿಸಬೇಕು ಎಂದು, ಲಕ್ಷಾಂತರ ರೂಪಾಯಿ ಹಣ ಕಟ್ಟಿ ಓದಿಸುತ್ತಿದ್ದರು. ಆದರೆ, ಮಗಳು ಖಿನ್ನತೆಗೋ ಅಥವಾ ಬೇರೆಯಾವುದೋ ಕಾರಣಕ್ಕೋ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಕಾಲೇಜಿನ ಪಿಜೆಯಲ್ಲಿ ಲಿಫ್ಟ್ ಮಾಡುವ ಜಾಗದಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾವುದೇ ಮುಂಜಾಗ್ರತೆ ಇಲ್ಲದೆ ಇರುವುದನ್ನು ಪೋಷಕರು ಖಂಡಿಸುತ್ತಿದ್ದಾರೆ. ಲಿಫ್ಟ್ ಮಾಡುವ ಜಾಗದಲ್ಲಿ ಮುಂಜಾಗ್ರತಾ ಕ್ರಮ ತಗೆದುಕೊಂಡು ನೆಟ್ ಅಳವಡಿಸಿದ್ದರೆ ಒಂದು ಪ್ರಾಣ ಉಳಿಯುತ್ತಿತ್ತು. ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ‌.

ಘಟನೆ ಕುರಿತು  ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೋಲೀಸರು ಯುವತಿಯ ಸಾವಿಗೆ ನಿಖರ ಕಾರಣ ಹುಡುಕಾಡುತ್ತಿದ್ದಾರೆ.

ಗೀತಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ಎಸ್ಪಿ ಚಂದ್ರಕಾಂತ್ ಪ್ರತಿಕ್ರಿಯೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಾಣಿಸುತ್ತಿದೆ.

ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ನಯನಾ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ‌ ಹಾಸ್ಟೆಲ್ ನಲ್ಲಿ ವಾಸವಿದ್ದಳು. ಕಾಲೇಜಿನಲ್ಲಿ ಲಿಫ್ಟ್ ಕೆಲಸ ನಡೆಯುತ್ತಿದೆ. 13 ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಚಂದ್ರಕಾಂತ್ ಹೇಳಿಕೆ ನೀಡಿದ್ದಾರೆ.

ಲಿಫ್ಟ್ ಮಾಡುವ ಜಾಗದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಇಲ್ಲ.  ಕಾಲೇಜು ಮಂಡಳಿಯ ನಿರ್ಲಕ್ಷ್ಯ ವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಒಟ್ಟಾರೆ ಬಾಳಿ ಬದುಕ ಬೇಕಿದ್ದ ಯುವತಿ ಅದು ಯಾವ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದು ನಿಗೂಡ. ಯುವತಿ ಸಾವಿನ ನಿಖರ ಕಾರಣ ಪೋಲೀಸ್ ತನಿಖೆಯ ನಂತರವೇ ತಿಳಿಯಬೇಕಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ಯುವಕ, ಯುವತಿಯರು ಆತ್ಮಹತ್ಯೆ ಕಡೆಗೆ ಮುಖ ಮಾಡುತ್ತಿರುವುದು ವಿಪರ್ಯಾಸ….

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

16 minutes ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 hour ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

7 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

19 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

19 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

20 hours ago