ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ ಓದಿದರೆ ಒಳ್ಳೆ ಮನೆಗೆ ಕೊಟ್ಟು ಮದುವೆ ಮಾಡಬಹುದು ಎಂದು ಕನಸು ಕಂಡು, ಇಂಜಿನಿಯರಿಂಗ್ ವ್ಯಾಸಾಂಗ ಮಾಡಲು ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಆದರೆ ಆಕೆಗೆ ಅದೇನಾಯ್ತೋ ಏನೋ ಗೊತ್ತಿಲ್ಲ. ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೌದು ಹೀಗೆ 13 ನೇ ಮಹಡಿಯಿಂದ ಕೆಳಗೆ ಬಿದ್ದಿರುವ ಯುವತಿ, ಅಯ್ಯೋ ಮಗಳಿಗೆ ಏನಾಯ್ತೋ ಏನೋ ಅಂತಾ ಶವಾಗಾರದ ಮುಂದೆ ಬಂದಿರುವ ಕುಟುಂಬಸ್ಥರು. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಶವಾಗಾರದ ಮುಂದೆ. ಹೌದು ಪ್ರತಿಷ್ಠಿತ ಗೀತಂ ಯೂನಿವರ್ಸಿಟಿಯಲ್ಲಿ ನೆನ್ನೆ 13 ನೇ ಮಹಡಿಯಿಂದ ನಯನಾ (19) ಎಂಬ ಯುವತಿ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಬ್ಬಕ್ಕೆ ಎಂದು ಮನೆಗೆ ಹೋಗಿದ್ದ ನಯನಾ ಫೆ.15 ರಂದು ಮತ್ತು ಕಾಲೇಜಿಗೆ ಬಂದಿದ್ದಳು. ನಗು ನಗುತ್ತಾ ಮಗಳನ್ನು ಕಾಲೇಜಿಗೆ ಬಿಟ್ಟು ಹೋಗಿದ್ದ ಪೋಷಕರಿಗೆ ರಾತ್ರಿ ಕಳೆದು ಹಗಲು ಆಗುತ್ತಿದ್ದಂತೆ ಮಗಳ ಸಾವಿನ ಸುದ್ದಿ ಬಂದಿದೆ.
ಇನ್ನೂ ಮನೆಗೆ ಇದ್ದ ಏಕೈಕ ಮಗಳು ನಯನಾ. ಹಾಗಾಗಿಯೇ ಒಳ್ಳೆಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿಸಬೇಕು ಎಂದು, ಲಕ್ಷಾಂತರ ರೂಪಾಯಿ ಹಣ ಕಟ್ಟಿ ಓದಿಸುತ್ತಿದ್ದರು. ಆದರೆ, ಮಗಳು ಖಿನ್ನತೆಗೋ ಅಥವಾ ಬೇರೆಯಾವುದೋ ಕಾರಣಕ್ಕೋ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಕಾಲೇಜಿನ ಪಿಜೆಯಲ್ಲಿ ಲಿಫ್ಟ್ ಮಾಡುವ ಜಾಗದಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾವುದೇ ಮುಂಜಾಗ್ರತೆ ಇಲ್ಲದೆ ಇರುವುದನ್ನು ಪೋಷಕರು ಖಂಡಿಸುತ್ತಿದ್ದಾರೆ. ಲಿಫ್ಟ್ ಮಾಡುವ ಜಾಗದಲ್ಲಿ ಮುಂಜಾಗ್ರತಾ ಕ್ರಮ ತಗೆದುಕೊಂಡು ನೆಟ್ ಅಳವಡಿಸಿದ್ದರೆ ಒಂದು ಪ್ರಾಣ ಉಳಿಯುತ್ತಿತ್ತು. ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೋಲೀಸರು ಯುವತಿಯ ಸಾವಿಗೆ ನಿಖರ ಕಾರಣ ಹುಡುಕಾಡುತ್ತಿದ್ದಾರೆ.
ಗೀತಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ಎಸ್ಪಿ ಚಂದ್ರಕಾಂತ್ ಪ್ರತಿಕ್ರಿಯೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಾಣಿಸುತ್ತಿದೆ.
ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ನಯನಾ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಕೆ ಹಾಸ್ಟೆಲ್ ನಲ್ಲಿ ವಾಸವಿದ್ದಳು. ಕಾಲೇಜಿನಲ್ಲಿ ಲಿಫ್ಟ್ ಕೆಲಸ ನಡೆಯುತ್ತಿದೆ. 13 ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಚಂದ್ರಕಾಂತ್ ಹೇಳಿಕೆ ನೀಡಿದ್ದಾರೆ.
ಲಿಫ್ಟ್ ಮಾಡುವ ಜಾಗದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಇಲ್ಲ. ಕಾಲೇಜು ಮಂಡಳಿಯ ನಿರ್ಲಕ್ಷ್ಯ ವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಒಟ್ಟಾರೆ ಬಾಳಿ ಬದುಕ ಬೇಕಿದ್ದ ಯುವತಿ ಅದು ಯಾವ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದು ನಿಗೂಡ. ಯುವತಿ ಸಾವಿನ ನಿಖರ ಕಾರಣ ಪೋಲೀಸ್ ತನಿಖೆಯ ನಂತರವೇ ತಿಳಿಯಬೇಕಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ಯುವಕ, ಯುವತಿಯರು ಆತ್ಮಹತ್ಯೆ ಕಡೆಗೆ ಮುಖ ಮಾಡುತ್ತಿರುವುದು ವಿಪರ್ಯಾಸ….
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…