ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ ಓದಿದರೆ ಒಳ್ಳೆ ಮನೆಗೆ ಕೊಟ್ಟು ಮದುವೆ ಮಾಡಬಹುದು ಎಂದು ಕನಸು ಕಂಡು,‌ ಇಂಜಿನಿಯರಿಂಗ್ ವ್ಯಾಸಾಂಗ ಮಾಡಲು ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಆದರೆ ಆಕೆಗೆ ಅದೇನಾಯ್ತೋ ಏನೋ ಗೊತ್ತಿಲ್ಲ. ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೌದು ಹೀಗೆ 13 ನೇ ಮಹಡಿಯಿಂದ ಕೆಳಗೆ ಬಿದ್ದಿರುವ ಯುವತಿ, ಅಯ್ಯೋ ಮಗಳಿಗೆ ಏನಾಯ್ತೋ ಏನೋ ಅಂತಾ ಶವಾಗಾರದ ಮುಂದೆ ಬಂದಿರುವ ಕುಟುಂಬಸ್ಥರು. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಶವಾಗಾರದ ಮುಂದೆ. ಹೌದು ಪ್ರತಿಷ್ಠಿತ ಗೀತಂ ಯೂನಿವರ್ಸಿಟಿಯಲ್ಲಿ ನೆನ್ನೆ 13 ನೇ ಮಹಡಿಯಿಂದ ನಯನಾ (19) ಎಂಬ ಯುವತಿ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಬ್ಬಕ್ಕೆ ಎಂದು ಮನೆಗೆ ಹೋಗಿದ್ದ ನಯನಾ ಫೆ.15 ರಂದು ಮತ್ತು ಕಾಲೇಜಿಗೆ ಬಂದಿದ್ದಳು. ನಗು ನಗುತ್ತಾ ಮಗಳನ್ನು ಕಾಲೇಜಿಗೆ ಬಿಟ್ಟು ಹೋಗಿದ್ದ ಪೋಷಕರಿಗೆ ರಾತ್ರಿ ಕಳೆದು ಹಗಲು ಆಗುತ್ತಿದ್ದಂತೆ ಮಗಳ ಸಾವಿನ ಸುದ್ದಿ ಬಂದಿದೆ.

ಇನ್ನೂ ಮನೆಗೆ ಇದ್ದ ಏಕೈಕ‌ ಮಗಳು ನಯನಾ. ಹಾಗಾಗಿಯೇ ಒಳ್ಳೆಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿಸಬೇಕು ಎಂದು, ಲಕ್ಷಾಂತರ ರೂಪಾಯಿ ಹಣ ಕಟ್ಟಿ ಓದಿಸುತ್ತಿದ್ದರು. ಆದರೆ, ಮಗಳು ಖಿನ್ನತೆಗೋ ಅಥವಾ ಬೇರೆಯಾವುದೋ ಕಾರಣಕ್ಕೋ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಕಾಲೇಜಿನ ಪಿಜೆಯಲ್ಲಿ ಲಿಫ್ಟ್ ಮಾಡುವ ಜಾಗದಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾವುದೇ ಮುಂಜಾಗ್ರತೆ ಇಲ್ಲದೆ ಇರುವುದನ್ನು ಪೋಷಕರು ಖಂಡಿಸುತ್ತಿದ್ದಾರೆ. ಲಿಫ್ಟ್ ಮಾಡುವ ಜಾಗದಲ್ಲಿ ಮುಂಜಾಗ್ರತಾ ಕ್ರಮ ತಗೆದುಕೊಂಡು ನೆಟ್ ಅಳವಡಿಸಿದ್ದರೆ ಒಂದು ಪ್ರಾಣ ಉಳಿಯುತ್ತಿತ್ತು. ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ‌.

ಘಟನೆ ಕುರಿತು  ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೋಲೀಸರು ಯುವತಿಯ ಸಾವಿಗೆ ನಿಖರ ಕಾರಣ ಹುಡುಕಾಡುತ್ತಿದ್ದಾರೆ.

ಗೀತಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ಎಸ್ಪಿ ಚಂದ್ರಕಾಂತ್ ಪ್ರತಿಕ್ರಿಯೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಾಣಿಸುತ್ತಿದೆ.

ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ನಯನಾ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ‌ ಹಾಸ್ಟೆಲ್ ನಲ್ಲಿ ವಾಸವಿದ್ದಳು. ಕಾಲೇಜಿನಲ್ಲಿ ಲಿಫ್ಟ್ ಕೆಲಸ ನಡೆಯುತ್ತಿದೆ. 13 ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಚಂದ್ರಕಾಂತ್ ಹೇಳಿಕೆ ನೀಡಿದ್ದಾರೆ.

ಲಿಫ್ಟ್ ಮಾಡುವ ಜಾಗದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಇಲ್ಲ.  ಕಾಲೇಜು ಮಂಡಳಿಯ ನಿರ್ಲಕ್ಷ್ಯ ವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಒಟ್ಟಾರೆ ಬಾಳಿ ಬದುಕ ಬೇಕಿದ್ದ ಯುವತಿ ಅದು ಯಾವ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದು ನಿಗೂಡ. ಯುವತಿ ಸಾವಿನ ನಿಖರ ಕಾರಣ ಪೋಲೀಸ್ ತನಿಖೆಯ ನಂತರವೇ ತಿಳಿಯಬೇಕಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ಯುವಕ, ಯುವತಿಯರು ಆತ್ಮಹತ್ಯೆ ಕಡೆಗೆ ಮುಖ ಮಾಡುತ್ತಿರುವುದು ವಿಪರ್ಯಾಸ….

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

8 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

11 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago