ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ ಓದಿದರೆ ಒಳ್ಳೆ ಮನೆಗೆ ಕೊಟ್ಟು ಮದುವೆ ಮಾಡಬಹುದು ಎಂದು ಕನಸು ಕಂಡು,‌ ಇಂಜಿನಿಯರಿಂಗ್ ವ್ಯಾಸಾಂಗ ಮಾಡಲು ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ದರು. ಆದರೆ ಆಕೆಗೆ ಅದೇನಾಯ್ತೋ ಏನೋ ಗೊತ್ತಿಲ್ಲ. ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೌದು ಹೀಗೆ 13 ನೇ ಮಹಡಿಯಿಂದ ಕೆಳಗೆ ಬಿದ್ದಿರುವ ಯುವತಿ, ಅಯ್ಯೋ ಮಗಳಿಗೆ ಏನಾಯ್ತೋ ಏನೋ ಅಂತಾ ಶವಾಗಾರದ ಮುಂದೆ ಬಂದಿರುವ ಕುಟುಂಬಸ್ಥರು. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಶವಾಗಾರದ ಮುಂದೆ. ಹೌದು ಪ್ರತಿಷ್ಠಿತ ಗೀತಂ ಯೂನಿವರ್ಸಿಟಿಯಲ್ಲಿ ನೆನ್ನೆ 13 ನೇ ಮಹಡಿಯಿಂದ ನಯನಾ (19) ಎಂಬ ಯುವತಿ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಬ್ಬಕ್ಕೆ ಎಂದು ಮನೆಗೆ ಹೋಗಿದ್ದ ನಯನಾ ಫೆ.15 ರಂದು ಮತ್ತು ಕಾಲೇಜಿಗೆ ಬಂದಿದ್ದಳು. ನಗು ನಗುತ್ತಾ ಮಗಳನ್ನು ಕಾಲೇಜಿಗೆ ಬಿಟ್ಟು ಹೋಗಿದ್ದ ಪೋಷಕರಿಗೆ ರಾತ್ರಿ ಕಳೆದು ಹಗಲು ಆಗುತ್ತಿದ್ದಂತೆ ಮಗಳ ಸಾವಿನ ಸುದ್ದಿ ಬಂದಿದೆ.

ಇನ್ನೂ ಮನೆಗೆ ಇದ್ದ ಏಕೈಕ‌ ಮಗಳು ನಯನಾ. ಹಾಗಾಗಿಯೇ ಒಳ್ಳೆಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿಸಬೇಕು ಎಂದು, ಲಕ್ಷಾಂತರ ರೂಪಾಯಿ ಹಣ ಕಟ್ಟಿ ಓದಿಸುತ್ತಿದ್ದರು. ಆದರೆ, ಮಗಳು ಖಿನ್ನತೆಗೋ ಅಥವಾ ಬೇರೆಯಾವುದೋ ಕಾರಣಕ್ಕೋ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಕಾಲೇಜಿನ ಪಿಜೆಯಲ್ಲಿ ಲಿಫ್ಟ್ ಮಾಡುವ ಜಾಗದಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾವುದೇ ಮುಂಜಾಗ್ರತೆ ಇಲ್ಲದೆ ಇರುವುದನ್ನು ಪೋಷಕರು ಖಂಡಿಸುತ್ತಿದ್ದಾರೆ. ಲಿಫ್ಟ್ ಮಾಡುವ ಜಾಗದಲ್ಲಿ ಮುಂಜಾಗ್ರತಾ ಕ್ರಮ ತಗೆದುಕೊಂಡು ನೆಟ್ ಅಳವಡಿಸಿದ್ದರೆ ಒಂದು ಪ್ರಾಣ ಉಳಿಯುತ್ತಿತ್ತು. ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ‌.

ಘಟನೆ ಕುರಿತು  ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೋಲೀಸರು ಯುವತಿಯ ಸಾವಿಗೆ ನಿಖರ ಕಾರಣ ಹುಡುಕಾಡುತ್ತಿದ್ದಾರೆ.

ಗೀತಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ಎಸ್ಪಿ ಚಂದ್ರಕಾಂತ್ ಪ್ರತಿಕ್ರಿಯೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಾಣಿಸುತ್ತಿದೆ.

ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ನಯನಾ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ‌ ಹಾಸ್ಟೆಲ್ ನಲ್ಲಿ ವಾಸವಿದ್ದಳು. ಕಾಲೇಜಿನಲ್ಲಿ ಲಿಫ್ಟ್ ಕೆಲಸ ನಡೆಯುತ್ತಿದೆ. 13 ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಚಂದ್ರಕಾಂತ್ ಹೇಳಿಕೆ ನೀಡಿದ್ದಾರೆ.

ಲಿಫ್ಟ್ ಮಾಡುವ ಜಾಗದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಇಲ್ಲ.  ಕಾಲೇಜು ಮಂಡಳಿಯ ನಿರ್ಲಕ್ಷ್ಯ ವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಒಟ್ಟಾರೆ ಬಾಳಿ ಬದುಕ ಬೇಕಿದ್ದ ಯುವತಿ ಅದು ಯಾವ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದು ನಿಗೂಡ. ಯುವತಿ ಸಾವಿನ ನಿಖರ ಕಾರಣ ಪೋಲೀಸ್ ತನಿಖೆಯ ನಂತರವೇ ತಿಳಿಯಬೇಕಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ಯುವಕ, ಯುವತಿಯರು ಆತ್ಮಹತ್ಯೆ ಕಡೆಗೆ ಮುಖ ಮಾಡುತ್ತಿರುವುದು ವಿಪರ್ಯಾಸ….

Ramesh Babu

Journalist

Recent Posts

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

4 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

10 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

10 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

23 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

23 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago