ಗೀತಂ‌ ವಿವಿಯಲ್ಲಿ ನಡೆದ 14ನೇ ವರ್ಷದ ಘಟಿಕೋತ್ಸವ

ನಾವೀನ್ಯತೆ ಶಿಕ್ಷಣದ ಜೀವಾಳ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಆವಿಷ್ಕಾರ ಆಗುವುದರ ತುರ್ತು ಅಗತ್ಯವಿದೆ. ಎಂಜಿನಿಯರಿಂಗ್ ಕ್ಷೇತ್ರ ಅತ್ಯಂತ ವೇಗವಾಗಿ ವಿಕಸನಗೊಳ್ಳುತ್ತಿದೆ. ಉದ್ಯೋಗದ ಭವಿಷ್ಯವು ಹೊಸ ಕೌಶಲ್ಯ, ಹೊಂದಿಕೊಳ್ಳುವಿಕೆ ಮತ್ತು ಬದಲಾವಣೆ ಸ್ವೀಕರಿಸುವ ಮನಸ್ಥಿತಿಯನ್ನು ಬಯಸುತ್ತಿದೆ. ಹೊಸದಾಗಿ ಪದವಿ ಪಡೆದವರು ಜ್ಞಾನದ ಅಡಿಪಾಯವನ್ನು ಹೊಂದಿರುವುದು ಮಾತ್ರವಲ್ಲದೇ ನಿರಂತರವಾಗಿ ಬದಲಾಗುತ್ತಿರುವ ವಿಕಸನ, ಆವಿಷ್ಕಾರ ಮತ್ತು ಅಭಿವೃದ್ಧಿಗೆ ಹೊಂದಿಕೊಳ್ಳುವ ಸಾಮರ್ಥ್ಯ‌ ಎಂದು ಸಲಹೆ ನೀಡಿದ AICTE‌ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ.

ಪ್ರತಿಷ್ಠಿತ ಗೀತಂ ಶಿಕ್ಷಣ ಸಂಸ್ಥೆಯ ದೊಡ್ಡಬಳ್ಳಾಪುರ ಸಮೀಪವಿರುವ ಬೆಂಗಳೂರು ಕ್ಯಾಂಪಸ್ ನಲ್ಲಿ 14 ನೇ ಘಟಿಕೋತ್ಸವ ಶನಿವಾರ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪಡೆದ 610 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಅವರು, ವಿಮರ್ಶಾತ್ಮಕ ಯೋಚನೆ, ಸಂಕೀರ್ಣ ಸಮಸ್ಯೆಗಳ ಪರಿಹಾರ ಮತ್ತು ಉದಯೋನ್ಮುಖ ತಂತ್ರಜ್ಞಾನ ಅಳವಡಿಸಿಕೊಳ್ಳಲು ಉಪಕರಣ ಮತ್ತು ಸಂಪನ್ಮೂಲಗಳೊಂದಿಗೆ ಅವಕಾಶ ನೀಡಬೇಕಾಗುತ್ತದೆ. ಶಿಕ್ಷಣವು ಒಂದು ಗಮ್ಯಸ್ಥಾನವಾಗಿರುವುದಿಲ್ಲ. ಆದರೆ, ಜೀವನ ಪರ್ಯಂತದ ಒಂದು ಪ್ರಯಾಣವಾಗಿರುತ್ತದೆ ಎಂಬುದನ್ನು ನಾವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಗೀತಂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ. ಭರತ್ ಮಾತನಾಡಿ, ಗೀತಂನ ಬೆಂಗಳೂರು ಕ್ಯಾಂಪಸ್ ನಲ್ಲಿ ನಾವು 2023 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುತ್ತಿರುವುದರ ಹಿಂದೆ ಸಾಕಷ್ಟು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನೆನಪಿಸಿಕೊಳ್ಳಬೇಕಾಗುತ್ತದೆ. ಆಳವಾದ ಆಶಾವಾದಗಳೊಂದಿಗೆ ನಾವು ಪದವೀಧರರು ತಮ್ಮ ಉನ್ನತ ಕೌಶಲ್ಯಗಳು, ನವೀನ ಬಗೆಯ ಆಲೋಚನೆಗಳು ಮತ್ತು ಅಚಲವಾದ ನಿರ್ಣಯಗಳೊಂದಿಗೆ ಜಗತ್ತನ್ನು ರೂಪಿಸಲು ತಮ್ಮ ಸೇವೆಯನ್ನು ಸಲ್ಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ’ ಎಂದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಮತ್ತು ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ಪದವಿ ಮತ್ತು ಪದಕಗಳನ್ನು ಪ್ರದಾನ ಮಾಡಿದರು. 2023 ರಲ್ಲಿ ಗೀತಂ ಸಂಸ್ಥೆಯ ಮೂರು ಕ್ಯಾಂಪಸ್ ಗಳಲ್ಲಿ ಒಟ್ಟು 4470 ವಿದ್ಯಾರ್ಥಿಗಳು ಪದವಿಗಳನ್ನು ಪಡೆದಿದ್ದಾರೆ.

ಗೀತಂ ವಿವಿ ಉಪಕುಲಪತಿ ಪ್ರೊ.ದಯಾನಂದ ಸಿದ್ದವಟ್ಟಂ ಅವರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಗೀತಂ ಬೆಂಗಳೂರು ಕ್ಯಾಂಪಸ್ ಉಪಕುಲಪತಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 509 ಎಂಜಿನಿಯರಿಂಗ್ ವಿದ್ಯಾರ್ಥಿಗಳು, 19 ವಿಜ್ಞಾನ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 82 ಮ್ಯಾನೇಜ್ಮೆಂಟ್ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಗೀತಂ ಅಧ್ಯಕ್ಷರ ಚಿನ್ನದ ಪದಕಗಳನ್ನು ಅತ್ಯುತ್ತಮ ಸಾಧನೆ ಮಾಡಿದ 10 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಗೀತಂ ವಿವಿ ಕಾರ್ಯದರ್ಶಿ ಎಂ.ಭಾರದ್ವಾಜ್, ರಿಜಿಸ್ಟ್ರಾರ್ ಡಾ.ಡಿ.ಗುಣಶೇಖರನ್, ಪ್ರೊ. ಗೌತಂ ರಾವ್ ಮತ್ತು ಬೆಂಗಳೂರು ಕ್ಯಾಂಪಸ್ ವಿಸಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ , ಗೀತಂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಬೋಧಕ ಸಿಬ್ಬಂದಿ, ಶಿಕ್ಷಣ ತಜ್ಞರು ಹಾಜರಿದ್ದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

50 minutes ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

3 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

5 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

7 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

18 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

18 hours ago