ಗೀತಂ‌ ವಿವಿಯಲ್ಲಿ ನಡೆದ 14ನೇ ವರ್ಷದ ಘಟಿಕೋತ್ಸವ

ನಾವೀನ್ಯತೆ ಶಿಕ್ಷಣದ ಜೀವಾಳ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಆವಿಷ್ಕಾರ ಆಗುವುದರ ತುರ್ತು ಅಗತ್ಯವಿದೆ. ಎಂಜಿನಿಯರಿಂಗ್ ಕ್ಷೇತ್ರ ಅತ್ಯಂತ ವೇಗವಾಗಿ ವಿಕಸನಗೊಳ್ಳುತ್ತಿದೆ. ಉದ್ಯೋಗದ ಭವಿಷ್ಯವು ಹೊಸ ಕೌಶಲ್ಯ, ಹೊಂದಿಕೊಳ್ಳುವಿಕೆ ಮತ್ತು ಬದಲಾವಣೆ ಸ್ವೀಕರಿಸುವ ಮನಸ್ಥಿತಿಯನ್ನು ಬಯಸುತ್ತಿದೆ. ಹೊಸದಾಗಿ ಪದವಿ ಪಡೆದವರು ಜ್ಞಾನದ ಅಡಿಪಾಯವನ್ನು ಹೊಂದಿರುವುದು ಮಾತ್ರವಲ್ಲದೇ ನಿರಂತರವಾಗಿ ಬದಲಾಗುತ್ತಿರುವ ವಿಕಸನ, ಆವಿಷ್ಕಾರ ಮತ್ತು ಅಭಿವೃದ್ಧಿಗೆ ಹೊಂದಿಕೊಳ್ಳುವ ಸಾಮರ್ಥ್ಯ‌ ಎಂದು ಸಲಹೆ ನೀಡಿದ AICTE‌ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ.

ಪ್ರತಿಷ್ಠಿತ ಗೀತಂ ಶಿಕ್ಷಣ ಸಂಸ್ಥೆಯ ದೊಡ್ಡಬಳ್ಳಾಪುರ ಸಮೀಪವಿರುವ ಬೆಂಗಳೂರು ಕ್ಯಾಂಪಸ್ ನಲ್ಲಿ 14 ನೇ ಘಟಿಕೋತ್ಸವ ಶನಿವಾರ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪಡೆದ 610 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಅವರು, ವಿಮರ್ಶಾತ್ಮಕ ಯೋಚನೆ, ಸಂಕೀರ್ಣ ಸಮಸ್ಯೆಗಳ ಪರಿಹಾರ ಮತ್ತು ಉದಯೋನ್ಮುಖ ತಂತ್ರಜ್ಞಾನ ಅಳವಡಿಸಿಕೊಳ್ಳಲು ಉಪಕರಣ ಮತ್ತು ಸಂಪನ್ಮೂಲಗಳೊಂದಿಗೆ ಅವಕಾಶ ನೀಡಬೇಕಾಗುತ್ತದೆ. ಶಿಕ್ಷಣವು ಒಂದು ಗಮ್ಯಸ್ಥಾನವಾಗಿರುವುದಿಲ್ಲ. ಆದರೆ, ಜೀವನ ಪರ್ಯಂತದ ಒಂದು ಪ್ರಯಾಣವಾಗಿರುತ್ತದೆ ಎಂಬುದನ್ನು ನಾವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಗೀತಂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ. ಭರತ್ ಮಾತನಾಡಿ, ಗೀತಂನ ಬೆಂಗಳೂರು ಕ್ಯಾಂಪಸ್ ನಲ್ಲಿ ನಾವು 2023 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುತ್ತಿರುವುದರ ಹಿಂದೆ ಸಾಕಷ್ಟು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನೆನಪಿಸಿಕೊಳ್ಳಬೇಕಾಗುತ್ತದೆ. ಆಳವಾದ ಆಶಾವಾದಗಳೊಂದಿಗೆ ನಾವು ಪದವೀಧರರು ತಮ್ಮ ಉನ್ನತ ಕೌಶಲ್ಯಗಳು, ನವೀನ ಬಗೆಯ ಆಲೋಚನೆಗಳು ಮತ್ತು ಅಚಲವಾದ ನಿರ್ಣಯಗಳೊಂದಿಗೆ ಜಗತ್ತನ್ನು ರೂಪಿಸಲು ತಮ್ಮ ಸೇವೆಯನ್ನು ಸಲ್ಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ’ ಎಂದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಮತ್ತು ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ಪದವಿ ಮತ್ತು ಪದಕಗಳನ್ನು ಪ್ರದಾನ ಮಾಡಿದರು. 2023 ರಲ್ಲಿ ಗೀತಂ ಸಂಸ್ಥೆಯ ಮೂರು ಕ್ಯಾಂಪಸ್ ಗಳಲ್ಲಿ ಒಟ್ಟು 4470 ವಿದ್ಯಾರ್ಥಿಗಳು ಪದವಿಗಳನ್ನು ಪಡೆದಿದ್ದಾರೆ.

ಗೀತಂ ವಿವಿ ಉಪಕುಲಪತಿ ಪ್ರೊ.ದಯಾನಂದ ಸಿದ್ದವಟ್ಟಂ ಅವರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಗೀತಂ ಬೆಂಗಳೂರು ಕ್ಯಾಂಪಸ್ ಉಪಕುಲಪತಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 509 ಎಂಜಿನಿಯರಿಂಗ್ ವಿದ್ಯಾರ್ಥಿಗಳು, 19 ವಿಜ್ಞಾನ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 82 ಮ್ಯಾನೇಜ್ಮೆಂಟ್ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಗೀತಂ ಅಧ್ಯಕ್ಷರ ಚಿನ್ನದ ಪದಕಗಳನ್ನು ಅತ್ಯುತ್ತಮ ಸಾಧನೆ ಮಾಡಿದ 10 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಗೀತಂ ವಿವಿ ಕಾರ್ಯದರ್ಶಿ ಎಂ.ಭಾರದ್ವಾಜ್, ರಿಜಿಸ್ಟ್ರಾರ್ ಡಾ.ಡಿ.ಗುಣಶೇಖರನ್, ಪ್ರೊ. ಗೌತಂ ರಾವ್ ಮತ್ತು ಬೆಂಗಳೂರು ಕ್ಯಾಂಪಸ್ ವಿಸಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ , ಗೀತಂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಬೋಧಕ ಸಿಬ್ಬಂದಿ, ಶಿಕ್ಷಣ ತಜ್ಞರು ಹಾಜರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

15 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

17 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

18 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

22 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

24 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago