ಗೀತಂ‌ ವಿವಿಯಲ್ಲಿ ನಡೆದ 14ನೇ ವರ್ಷದ ಘಟಿಕೋತ್ಸವ

ನಾವೀನ್ಯತೆ ಶಿಕ್ಷಣದ ಜೀವಾಳ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಆವಿಷ್ಕಾರ ಆಗುವುದರ ತುರ್ತು ಅಗತ್ಯವಿದೆ. ಎಂಜಿನಿಯರಿಂಗ್ ಕ್ಷೇತ್ರ ಅತ್ಯಂತ ವೇಗವಾಗಿ ವಿಕಸನಗೊಳ್ಳುತ್ತಿದೆ. ಉದ್ಯೋಗದ ಭವಿಷ್ಯವು ಹೊಸ ಕೌಶಲ್ಯ, ಹೊಂದಿಕೊಳ್ಳುವಿಕೆ ಮತ್ತು ಬದಲಾವಣೆ ಸ್ವೀಕರಿಸುವ ಮನಸ್ಥಿತಿಯನ್ನು ಬಯಸುತ್ತಿದೆ. ಹೊಸದಾಗಿ ಪದವಿ ಪಡೆದವರು ಜ್ಞಾನದ ಅಡಿಪಾಯವನ್ನು ಹೊಂದಿರುವುದು ಮಾತ್ರವಲ್ಲದೇ ನಿರಂತರವಾಗಿ ಬದಲಾಗುತ್ತಿರುವ ವಿಕಸನ, ಆವಿಷ್ಕಾರ ಮತ್ತು ಅಭಿವೃದ್ಧಿಗೆ ಹೊಂದಿಕೊಳ್ಳುವ ಸಾಮರ್ಥ್ಯ‌ ಎಂದು ಸಲಹೆ ನೀಡಿದ AICTE‌ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ.

ಪ್ರತಿಷ್ಠಿತ ಗೀತಂ ಶಿಕ್ಷಣ ಸಂಸ್ಥೆಯ ದೊಡ್ಡಬಳ್ಳಾಪುರ ಸಮೀಪವಿರುವ ಬೆಂಗಳೂರು ಕ್ಯಾಂಪಸ್ ನಲ್ಲಿ 14 ನೇ ಘಟಿಕೋತ್ಸವ ಶನಿವಾರ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪಡೆದ 610 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಅವರು, ವಿಮರ್ಶಾತ್ಮಕ ಯೋಚನೆ, ಸಂಕೀರ್ಣ ಸಮಸ್ಯೆಗಳ ಪರಿಹಾರ ಮತ್ತು ಉದಯೋನ್ಮುಖ ತಂತ್ರಜ್ಞಾನ ಅಳವಡಿಸಿಕೊಳ್ಳಲು ಉಪಕರಣ ಮತ್ತು ಸಂಪನ್ಮೂಲಗಳೊಂದಿಗೆ ಅವಕಾಶ ನೀಡಬೇಕಾಗುತ್ತದೆ. ಶಿಕ್ಷಣವು ಒಂದು ಗಮ್ಯಸ್ಥಾನವಾಗಿರುವುದಿಲ್ಲ. ಆದರೆ, ಜೀವನ ಪರ್ಯಂತದ ಒಂದು ಪ್ರಯಾಣವಾಗಿರುತ್ತದೆ ಎಂಬುದನ್ನು ನಾವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಗೀತಂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ. ಭರತ್ ಮಾತನಾಡಿ, ಗೀತಂನ ಬೆಂಗಳೂರು ಕ್ಯಾಂಪಸ್ ನಲ್ಲಿ ನಾವು 2023 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುತ್ತಿರುವುದರ ಹಿಂದೆ ಸಾಕಷ್ಟು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನೆನಪಿಸಿಕೊಳ್ಳಬೇಕಾಗುತ್ತದೆ. ಆಳವಾದ ಆಶಾವಾದಗಳೊಂದಿಗೆ ನಾವು ಪದವೀಧರರು ತಮ್ಮ ಉನ್ನತ ಕೌಶಲ್ಯಗಳು, ನವೀನ ಬಗೆಯ ಆಲೋಚನೆಗಳು ಮತ್ತು ಅಚಲವಾದ ನಿರ್ಣಯಗಳೊಂದಿಗೆ ಜಗತ್ತನ್ನು ರೂಪಿಸಲು ತಮ್ಮ ಸೇವೆಯನ್ನು ಸಲ್ಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ’ ಎಂದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಮತ್ತು ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ಪದವಿ ಮತ್ತು ಪದಕಗಳನ್ನು ಪ್ರದಾನ ಮಾಡಿದರು. 2023 ರಲ್ಲಿ ಗೀತಂ ಸಂಸ್ಥೆಯ ಮೂರು ಕ್ಯಾಂಪಸ್ ಗಳಲ್ಲಿ ಒಟ್ಟು 4470 ವಿದ್ಯಾರ್ಥಿಗಳು ಪದವಿಗಳನ್ನು ಪಡೆದಿದ್ದಾರೆ.

ಗೀತಂ ವಿವಿ ಉಪಕುಲಪತಿ ಪ್ರೊ.ದಯಾನಂದ ಸಿದ್ದವಟ್ಟಂ ಅವರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಗೀತಂ ಬೆಂಗಳೂರು ಕ್ಯಾಂಪಸ್ ಉಪಕುಲಪತಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 509 ಎಂಜಿನಿಯರಿಂಗ್ ವಿದ್ಯಾರ್ಥಿಗಳು, 19 ವಿಜ್ಞಾನ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 82 ಮ್ಯಾನೇಜ್ಮೆಂಟ್ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಗೀತಂ ಅಧ್ಯಕ್ಷರ ಚಿನ್ನದ ಪದಕಗಳನ್ನು ಅತ್ಯುತ್ತಮ ಸಾಧನೆ ಮಾಡಿದ 10 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಗೀತಂ ವಿವಿ ಕಾರ್ಯದರ್ಶಿ ಎಂ.ಭಾರದ್ವಾಜ್, ರಿಜಿಸ್ಟ್ರಾರ್ ಡಾ.ಡಿ.ಗುಣಶೇಖರನ್, ಪ್ರೊ. ಗೌತಂ ರಾವ್ ಮತ್ತು ಬೆಂಗಳೂರು ಕ್ಯಾಂಪಸ್ ವಿಸಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ , ಗೀತಂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಬೋಧಕ ಸಿಬ್ಬಂದಿ, ಶಿಕ್ಷಣ ತಜ್ಞರು ಹಾಜರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

20 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago