ಗೀತಂ‌ ವಿವಿಯಲ್ಲಿ ನಡೆದ 14ನೇ ವರ್ಷದ ಘಟಿಕೋತ್ಸವ

ನಾವೀನ್ಯತೆ ಶಿಕ್ಷಣದ ಜೀವಾಳ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಆವಿಷ್ಕಾರ ಆಗುವುದರ ತುರ್ತು ಅಗತ್ಯವಿದೆ. ಎಂಜಿನಿಯರಿಂಗ್ ಕ್ಷೇತ್ರ ಅತ್ಯಂತ ವೇಗವಾಗಿ ವಿಕಸನಗೊಳ್ಳುತ್ತಿದೆ. ಉದ್ಯೋಗದ ಭವಿಷ್ಯವು ಹೊಸ ಕೌಶಲ್ಯ, ಹೊಂದಿಕೊಳ್ಳುವಿಕೆ ಮತ್ತು ಬದಲಾವಣೆ ಸ್ವೀಕರಿಸುವ ಮನಸ್ಥಿತಿಯನ್ನು ಬಯಸುತ್ತಿದೆ. ಹೊಸದಾಗಿ ಪದವಿ ಪಡೆದವರು ಜ್ಞಾನದ ಅಡಿಪಾಯವನ್ನು ಹೊಂದಿರುವುದು ಮಾತ್ರವಲ್ಲದೇ ನಿರಂತರವಾಗಿ ಬದಲಾಗುತ್ತಿರುವ ವಿಕಸನ, ಆವಿಷ್ಕಾರ ಮತ್ತು ಅಭಿವೃದ್ಧಿಗೆ ಹೊಂದಿಕೊಳ್ಳುವ ಸಾಮರ್ಥ್ಯ‌ ಎಂದು ಸಲಹೆ ನೀಡಿದ AICTE‌ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ.

ಪ್ರತಿಷ್ಠಿತ ಗೀತಂ ಶಿಕ್ಷಣ ಸಂಸ್ಥೆಯ ದೊಡ್ಡಬಳ್ಳಾಪುರ ಸಮೀಪವಿರುವ ಬೆಂಗಳೂರು ಕ್ಯಾಂಪಸ್ ನಲ್ಲಿ 14 ನೇ ಘಟಿಕೋತ್ಸವ ಶನಿವಾರ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪಡೆದ 610 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಅವರು, ವಿಮರ್ಶಾತ್ಮಕ ಯೋಚನೆ, ಸಂಕೀರ್ಣ ಸಮಸ್ಯೆಗಳ ಪರಿಹಾರ ಮತ್ತು ಉದಯೋನ್ಮುಖ ತಂತ್ರಜ್ಞಾನ ಅಳವಡಿಸಿಕೊಳ್ಳಲು ಉಪಕರಣ ಮತ್ತು ಸಂಪನ್ಮೂಲಗಳೊಂದಿಗೆ ಅವಕಾಶ ನೀಡಬೇಕಾಗುತ್ತದೆ. ಶಿಕ್ಷಣವು ಒಂದು ಗಮ್ಯಸ್ಥಾನವಾಗಿರುವುದಿಲ್ಲ. ಆದರೆ, ಜೀವನ ಪರ್ಯಂತದ ಒಂದು ಪ್ರಯಾಣವಾಗಿರುತ್ತದೆ ಎಂಬುದನ್ನು ನಾವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಗೀತಂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ. ಭರತ್ ಮಾತನಾಡಿ, ಗೀತಂನ ಬೆಂಗಳೂರು ಕ್ಯಾಂಪಸ್ ನಲ್ಲಿ ನಾವು 2023 ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುತ್ತಿರುವುದರ ಹಿಂದೆ ಸಾಕಷ್ಟು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನೆನಪಿಸಿಕೊಳ್ಳಬೇಕಾಗುತ್ತದೆ. ಆಳವಾದ ಆಶಾವಾದಗಳೊಂದಿಗೆ ನಾವು ಪದವೀಧರರು ತಮ್ಮ ಉನ್ನತ ಕೌಶಲ್ಯಗಳು, ನವೀನ ಬಗೆಯ ಆಲೋಚನೆಗಳು ಮತ್ತು ಅಚಲವಾದ ನಿರ್ಣಯಗಳೊಂದಿಗೆ ಜಗತ್ತನ್ನು ರೂಪಿಸಲು ತಮ್ಮ ಸೇವೆಯನ್ನು ಸಲ್ಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ’ ಎಂದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಮತ್ತು ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ಪದವಿ ಮತ್ತು ಪದಕಗಳನ್ನು ಪ್ರದಾನ ಮಾಡಿದರು. 2023 ರಲ್ಲಿ ಗೀತಂ ಸಂಸ್ಥೆಯ ಮೂರು ಕ್ಯಾಂಪಸ್ ಗಳಲ್ಲಿ ಒಟ್ಟು 4470 ವಿದ್ಯಾರ್ಥಿಗಳು ಪದವಿಗಳನ್ನು ಪಡೆದಿದ್ದಾರೆ.

ಗೀತಂ ವಿವಿ ಉಪಕುಲಪತಿ ಪ್ರೊ.ದಯಾನಂದ ಸಿದ್ದವಟ್ಟಂ ಅವರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಗೀತಂ ಬೆಂಗಳೂರು ಕ್ಯಾಂಪಸ್ ಉಪಕುಲಪತಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 509 ಎಂಜಿನಿಯರಿಂಗ್ ವಿದ್ಯಾರ್ಥಿಗಳು, 19 ವಿಜ್ಞಾನ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 82 ಮ್ಯಾನೇಜ್ಮೆಂಟ್ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಗೀತಂ ಅಧ್ಯಕ್ಷರ ಚಿನ್ನದ ಪದಕಗಳನ್ನು ಅತ್ಯುತ್ತಮ ಸಾಧನೆ ಮಾಡಿದ 10 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಗೀತಂ ವಿವಿ ಕಾರ್ಯದರ್ಶಿ ಎಂ.ಭಾರದ್ವಾಜ್, ರಿಜಿಸ್ಟ್ರಾರ್ ಡಾ.ಡಿ.ಗುಣಶೇಖರನ್, ಪ್ರೊ. ಗೌತಂ ರಾವ್ ಮತ್ತು ಬೆಂಗಳೂರು ಕ್ಯಾಂಪಸ್ ವಿಸಿ ಪ್ರೊ.ಎಂ.ಎಸ್.ಮೋಹನ್ ಕುಮಾರ್ , ಗೀತಂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಬೋಧಕ ಸಿಬ್ಬಂದಿ, ಶಿಕ್ಷಣ ತಜ್ಞರು ಹಾಜರಿದ್ದರು.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

3 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

3 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

15 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

17 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

17 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

18 hours ago