ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಳೆದ ರಾತ್ರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಗೀತಂ ವಿಶ್ವವಿದ್ಯಾಲಯದ ಬಿ.ಟೆಕ್ ವಿದ್ಯಾರ್ಥಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಗೀತಂ ಆಡಳಿತ ಮಂಡಳಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ಪೊಲೀಸರು ಬರುವವರೆಗೂ ಕಾಯದೇ ಮೃತದೇಹ ತೆರವು ಮಾಡಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಗೀತಂ ವಿ.ವಿಯಲ್ಲಿ ಈ ಹಿಂದೆ ಕೂಡ ಹಲವು ವಿದ್ಯಾರ್ಥಿಗಳು ನಿಗೂಢವಾಗಿ ಮೃತಪಟ್ಟಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ವಿದೇಶಿ ಮೂಲದ ವಿದ್ಯಾರ್ಥಿ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಇನ್ನೊಬ್ಬ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದರು. ಮತ್ತೊಬ್ಬ ವಿದ್ಯಾರ್ಥಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗೆ ಸಾಲು ಸಾಲು ವಿದ್ಯಾರ್ಥಿಗಳ ಸಾವು ಮುಂದುವರಿದರೂ ಆಡಳಿತ ಮಂಡಳಿ ಯಾವುದೇ ಕ್ರಮ ಜರುಗಿಸದಿರುವುದು ಯಕ್ಷ ಪ್ರಶ್ನೆಯಾಗಿದೆ.
ಗೀತಂ ಕಾಲೇಜು ಸುತ್ತಮುತ್ತ ಗಾಂಜಾ ಮಾರಾಟ ಅವ್ಯಾಹತವಾಗಿದ್ದು, ಪದೇ ಪದೇ ಗಲಾಟೆಗಳು ಕೂಡ ನಡೆದಿದ್ದರೂ ಆಡಳಿತ ಮಂಡಳಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…