ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

 

ದೊಡ್ಡಬಳ್ಳಾಪುರ ತಾಲೂಕಿನ ‌ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಳೆದ ರಾತ್ರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಮೃತ ವಿದ್ಯಾರ್ಥಿ. ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಗೀತಂ ವಿಶ್ವವಿದ್ಯಾಲಯದ ಬಿ.ಟೆಕ್ ವಿದ್ಯಾರ್ಥಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

 ಗೀತಂ ಆಡಳಿತ ಮಂಡಳಿ ಪೊಲೀಸರಿಗೆ ಯಾವುದೇ ಮಾಹಿತಿ‌ ನೀಡದೇ, ಪೊಲೀಸರು ಬರುವವರೆಗೂ ಕಾಯದೇ ಮೃತದೇಹ ತೆರವು ಮಾಡಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಗೀತಂ ವಿ.ವಿಯಲ್ಲಿ ಈ ಹಿಂದೆ ಕೂಡ ಹಲವು ವಿದ್ಯಾರ್ಥಿಗಳು ನಿಗೂಢವಾಗಿ ಮೃತಪಟ್ಟಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ವಿದೇಶಿ ಮೂಲದ ವಿದ್ಯಾರ್ಥಿ ಆರನೇ ಮಹಡಿಯಿಂದ ಬಿದ್ದು‌ ಮೃತಪಟ್ಟಿದ್ದರು. ಇನ್ನೊಬ್ಬ ವಿದ್ಯಾರ್ಥಿ‌ ನೇಣು ಹಾಕಿಕೊಂಡಿದ್ದರು. ಮತ್ತೊಬ್ಬ ವಿದ್ಯಾರ್ಥಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗೆ ಸಾಲು ಸಾಲು ವಿದ್ಯಾರ್ಥಿಗಳ ಸಾವು ಮುಂದುವರಿದರೂ ಆಡಳಿತ ಮಂಡಳಿ ಯಾವುದೇ ಕ್ರಮ ಜರುಗಿಸದಿರುವುದು ಯಕ್ಷ ಪ್ರಶ್ನೆಯಾಗಿದೆ.

ಗೀತಂ ಕಾಲೇಜು ಸುತ್ತಮುತ್ತ ಗಾಂಜಾ ಮಾರಾಟ ಅವ್ಯಾಹತವಾಗಿದ್ದು, ಪದೇ ಪದೇ ಗಲಾಟೆಗಳು ಕೂಡ ನಡೆದಿದ್ದರೂ ಆಡಳಿತ ಮಂಡಳಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

8 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

24 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

24 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago