ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಳೆದ ರಾತ್ರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಗೀತಂ ವಿಶ್ವವಿದ್ಯಾಲಯದ ಬಿ.ಟೆಕ್ ವಿದ್ಯಾರ್ಥಿ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಗೀತಂ ಆಡಳಿತ ಮಂಡಳಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ಪೊಲೀಸರು ಬರುವವರೆಗೂ ಕಾಯದೇ ಮೃತದೇಹ ತೆರವು ಮಾಡಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಗೀತಂ ವಿ.ವಿಯಲ್ಲಿ ಈ ಹಿಂದೆ ಕೂಡ ಹಲವು ವಿದ್ಯಾರ್ಥಿಗಳು ನಿಗೂಢವಾಗಿ ಮೃತಪಟ್ಟಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ವಿದೇಶಿ ಮೂಲದ ವಿದ್ಯಾರ್ಥಿ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಇನ್ನೊಬ್ಬ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದರು. ಮತ್ತೊಬ್ಬ ವಿದ್ಯಾರ್ಥಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗೆ ಸಾಲು ಸಾಲು ವಿದ್ಯಾರ್ಥಿಗಳ ಸಾವು ಮುಂದುವರಿದರೂ ಆಡಳಿತ ಮಂಡಳಿ ಯಾವುದೇ ಕ್ರಮ ಜರುಗಿಸದಿರುವುದು ಯಕ್ಷ ಪ್ರಶ್ನೆಯಾಗಿದೆ.
ಗೀತಂ ಕಾಲೇಜು ಸುತ್ತಮುತ್ತ ಗಾಂಜಾ ಮಾರಾಟ ಅವ್ಯಾಹತವಾಗಿದ್ದು, ಪದೇ ಪದೇ ಗಲಾಟೆಗಳು ಕೂಡ ನಡೆದಿದ್ದರೂ ಆಡಳಿತ ಮಂಡಳಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…