
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು 6ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಗುಂಡಮ್ಮಗೆರೆ ಕ್ರಾಸ್ ಬಳಿ ನಡೆದಿದೆ…
ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ತೋಂಡೇಬಾವಿಯಿಂದ ದೊಡ್ಡಬಳ್ಳಾಪುರದ ಕಡೆಗೆ ಖಾಸಗಿ ಕಂಪನಿ ಬಸ್ ಬರುವ ವೇಳೆ ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ..

ಡಿಕ್ಕಿ ರಭಸಕ್ಕೆ ಬೈಕ್ ಬಸ್ಸಿನಡಿ ಸಿಲುಕಿಕೊಂಡಿದ್ದು, ಹಲವು ಮೀಟರ್ ದೂರದಷ್ಟು ಎಳದೊಯ್ದಿದೆ. ಬಸ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರ ಸಹಾಯದಿಂದ ಬೈಕ್ ಸವಾರನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ…
ಗಾಯಾಳುವಿನ ಹೆಸರು, ವಯಸ್ಸು, ವಿಳಾಸ ತಿಳಿದುಬಂದಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….