ಗುಂಡಿಮಯವಾದ ತೂಬಗೆರೆ-ಮಂಚೇನಹಳ್ಳಿ ರಸ್ತೆ-ಹದಗೆಟ್ಟ ರಸ್ತೆಯಿಂದಾಗಿ ಬೇಸತ್ತ ಗ್ರಾಮಸ್ಥರು- ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ತಾಲೂಕಿನ ತೂಬಗೆರೆ -ಮಂಚೇನಹಳ್ಳಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ವಾಹನ ಸವಾರರು ನಿತ್ಯ ಮಳೆ ನೀರು ತುಂಬಿದ ಗುಂಡಿಗಳಲ್ಲಿ ಅಪಘಾತ ಭಯದಲ್ಲಿ ಸಂಚಾರ ನಡೆಸುವಂತಾಗಿದೆ. ಆದ್ದರಿಂದ ಕೂಡಲೇ ರಸ್ತೆ ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಇಂದು ಬೆಳಗ್ಗೆ ಗ್ರಾಮಸ್ಥರು ಹಾಗೂ ವಾಹನ ಸವಾರರು ಪ್ರತಿಭಟನೆ ನಡೆಸಿದರು.

ತೂಬಗೆರೆ ಭಾಗದಲ್ಲಿ ಎರಡು ವಾರದಿಂದ ಸುರಿದ ಮಳೆಯಿಂದಾಗಿ ರಸ್ತೆ ಹದಗೆಟ್ಟಿದ್ದು, ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ದುರಸ್ತಿ ಮಾಡಿಸುವಂತೆ ಸತತ ಮೂರ್ನಾಲ್ಕು ವರ್ಷದಿಂದ ಸಾಕಷ್ಟು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗೂ ಕೆಲ ದಿನಗಳ ಹಿಂದೆ ರಸ್ತೆಗೆ ತೇಪೆ ಹಾಕಿ ಕೈತೋಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನಕ್ಕೆ ಬೇಸತ್ತ ಗ್ರಾಮಸ್ಥರು ಶುಕ್ರವಾರ ರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು. ಈ ಮೂಲಕವಾದರೂ ಶಾಸಕರು ಹಾಗೂ ಸರ್ಕಾರ ಇತ್ತ ಗಮನ ಹರಿಸುತ್ತಾರೆಯೇ ಎಂಬುದು ಗ್ರಾಮಸ್ಥರ ಆಶಯವಾಗಿದೆ.

ರಸ್ತೆ ಹಾಳಾಗಿರುವುದರಿಂದ ದಿನನಿತ್ಯ ಸುಗಮ ಸಂಚಾರ ನಡೆಸಲು ಸಹ ಕಷ್ಟವಾಗಿದೆ. ಅಲ್ಲದೇ ಸೋಮವಾರ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಗ್ರಾಮಸ್ಥರು ಹರಸಾಹಸವನ್ನೇಪಟ್ಟಿದ್ದಾರೆ ಎಂದು ಪ್ರತಿಭಟನಾನಿರತರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 minutes ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

7 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

13 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago