ಗುಂಡಿಮಯವಾದ ತೂಬಗೆರೆ-ಮಂಚೇನಹಳ್ಳಿ ರಸ್ತೆ-ಹದಗೆಟ್ಟ ರಸ್ತೆಯಿಂದಾಗಿ ಬೇಸತ್ತ ಗ್ರಾಮಸ್ಥರು- ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ತಾಲೂಕಿನ ತೂಬಗೆರೆ -ಮಂಚೇನಹಳ್ಳಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ವಾಹನ ಸವಾರರು ನಿತ್ಯ ಮಳೆ ನೀರು ತುಂಬಿದ ಗುಂಡಿಗಳಲ್ಲಿ ಅಪಘಾತ ಭಯದಲ್ಲಿ ಸಂಚಾರ ನಡೆಸುವಂತಾಗಿದೆ. ಆದ್ದರಿಂದ ಕೂಡಲೇ ರಸ್ತೆ ದುರಸ್ತಿ ಮಾಡಿಸುವಂತೆ ಒತ್ತಾಯಿಸಿ ಇಂದು ಬೆಳಗ್ಗೆ ಗ್ರಾಮಸ್ಥರು ಹಾಗೂ ವಾಹನ ಸವಾರರು ಪ್ರತಿಭಟನೆ ನಡೆಸಿದರು.

ತೂಬಗೆರೆ ಭಾಗದಲ್ಲಿ ಎರಡು ವಾರದಿಂದ ಸುರಿದ ಮಳೆಯಿಂದಾಗಿ ರಸ್ತೆ ಹದಗೆಟ್ಟಿದ್ದು, ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ದುರಸ್ತಿ ಮಾಡಿಸುವಂತೆ ಸತತ ಮೂರ್ನಾಲ್ಕು ವರ್ಷದಿಂದ ಸಾಕಷ್ಟು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗೂ ಕೆಲ ದಿನಗಳ ಹಿಂದೆ ರಸ್ತೆಗೆ ತೇಪೆ ಹಾಕಿ ಕೈತೋಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನಕ್ಕೆ ಬೇಸತ್ತ ಗ್ರಾಮಸ್ಥರು ಶುಕ್ರವಾರ ರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು. ಈ ಮೂಲಕವಾದರೂ ಶಾಸಕರು ಹಾಗೂ ಸರ್ಕಾರ ಇತ್ತ ಗಮನ ಹರಿಸುತ್ತಾರೆಯೇ ಎಂಬುದು ಗ್ರಾಮಸ್ಥರ ಆಶಯವಾಗಿದೆ.

ರಸ್ತೆ ಹಾಳಾಗಿರುವುದರಿಂದ ದಿನನಿತ್ಯ ಸುಗಮ ಸಂಚಾರ ನಡೆಸಲು ಸಹ ಕಷ್ಟವಾಗಿದೆ. ಅಲ್ಲದೇ ಸೋಮವಾರ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಗ್ರಾಮಸ್ಥರು ಹರಸಾಹಸವನ್ನೇಪಟ್ಟಿದ್ದಾರೆ ಎಂದು ಪ್ರತಿಭಟನಾನಿರತರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

2 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

4 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

11 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

19 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

20 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago