ಗುಜರಿ ಅಂಗಡಿ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…