ಗುಜರಿ ಅಂಗಡಿ ಬಳಿ ನಿಲ್ಲಿಸಿದ್ದ ಗೂಡ್ಸ್ ವಾಹನ ಕಳವು: ಕಣ್ಣೀರಿಟ್ಟ ಮಾಲೀಕ

ಗುಜರಿ ಅಂಗಡಿ‌ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.

ನಗರದ ಡಿ.ಕ್ರಾಸ್ ಬಳಿ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹಮದ್ ಎಂಬುವರು ಆ.24ರ ರಾತ್ರಿ ಎಂದಿನಂತೆ ಗುಜರಿ ಅಂಗಡಿ ಮುಂಭಾಗ ನಿಲ್ಲಿಸಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ಮಾಡೆಲ್ ಹೆಸರಿನ ಗೂಡ್ಸ್ ಗಾಡಿಯನ್ನು ಪಾರ್ಕ್ ಮಾಡಿ ಹೋಗಿದ್ದಾರೆ. ಆ.25ರ ಬೆಳಗ್ಗೆ ಅಂಗಡಿ ಬಳಿ ಬಂದು ನೋಡುವಷ್ಟರಲ್ಲಿ ವಾಹನ ನಾಪತ್ತೆಯಾಗಿದೆ.

ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

9 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

14 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

7 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

7 hours ago