ಗುಜರಿ ಅಂಗಡಿ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…