ಗುಜರಿ ಅಂಗಡಿ ಬಳಿ ನಿಲ್ಲಿಸಿದ್ದ ಗೂಡ್ಸ್ ವಾಹನ ಕಳವು: ಕಣ್ಣೀರಿಟ್ಟ ಮಾಲೀಕ

ಗುಜರಿ ಅಂಗಡಿ‌ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.

ನಗರದ ಡಿ.ಕ್ರಾಸ್ ಬಳಿ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹಮದ್ ಎಂಬುವರು ಆ.24ರ ರಾತ್ರಿ ಎಂದಿನಂತೆ ಗುಜರಿ ಅಂಗಡಿ ಮುಂಭಾಗ ನಿಲ್ಲಿಸಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ಮಾಡೆಲ್ ಹೆಸರಿನ ಗೂಡ್ಸ್ ಗಾಡಿಯನ್ನು ಪಾರ್ಕ್ ಮಾಡಿ ಹೋಗಿದ್ದಾರೆ. ಆ.25ರ ಬೆಳಗ್ಗೆ ಅಂಗಡಿ ಬಳಿ ಬಂದು ನೋಡುವಷ್ಟರಲ್ಲಿ ವಾಹನ ನಾಪತ್ತೆಯಾಗಿದೆ.

ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

33 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

6 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

8 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

23 hours ago