ಗುಜರಿ ಅಂಗಡಿ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…