ಗುಜರಿ ಅಂಗಡಿ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…