ಗುಜರಿ ಅಂಗಡಿ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…