ಗುಜರಿ ಅಂಗಡಿ ಮುಂದೆ ಎಂದಿನಂತೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ರಾತ್ರೋರಾತ್ರಿ ಕಳವು ಮಾಡಿರುವ ಘಟನೆ ನಗರದ ಡಿ.ಕ್ರಾಸ್ ಸಮೀಪದ ರೈಲ್ವೆ ಅಂಡರ್ ಪಾಸ್ ಬ್ರಿಡ್ಜ್ ಬಳಿ ನಡೆದಿದೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗುಜರಿ ಅಂಗಡಿ ಮಾಲೀಕ ನಿಸಾರ್ ಅಹ್ಮದ್ ಮಾತನಾಡಿ, ಗೂಡ್ಸ್ ವಾಹನ ಖರೀದಿಸಲು ನನ್ನ ಹೆಂಡತಿ ಮಹಿಳಾ ಸ್ತ್ರೀ ಸಂಘದಲ್ಲಿ 2 ಲಕ್ಷ್ಮ ರೂ. ಸಾಲ ಮಾಡಿ ಕೊಟ್ಟಿದ್ದರು. 9 ಲಕ್ಷ ಮೌಲ್ಯದ ಗಾಡಿಯನ್ನು ಗುಜರಿ ವಸ್ತುಗಳ ಸಾರಿಗೆಯ ಅನುಕೂಲ ದೃಷ್ಟಿಯಿಂದ ಕಳೆದ ಎರಡೂವರೆ ತಿಂಗಳ ಹಿಂದೆ ತೆಗೆದುಕೊಂಡಿದ್ದೆ. ನಮ್ಮ ಕುಟುಂಬಕ್ಕೆ ಗುಜರಿ ಅಂಗಡಿಯೇ ಜೀವನಾಧಾರ, ಇದಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಣವನ್ನು ಗೂಡ್ಸ್ ವಾಹನ ಖರೀದಿಸಲು ಬಂಡವಾಳವನ್ನು ಹಾಕಿದ್ದೆ. ಇದೀಗ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ನಮಗೆ ಆಘಾತವಾಗಿದೆ ಬ್ಯಾಂಕ್ ನವರು ಇಎಂಐ ಕಟ್ಟಿ ಗಾಡಿ ಸಿಗುತ್ತೆ ಅಂತಾ ಹೇಳುತ್ತಿದ್ದಾರೆ. ಇಎಂಐ ಕಟ್ಟಲು ಹಣ ಇಲ್ಲ ಎಂದು ಕಣ್ಣಿರಿಟ್ಟರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…